ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ವ್ಹೀಲ್ಚೇರ್ ವಿತರಣೆ
Wheelchair distribution by Dharmasthala Rural Development Project
ಉಗರಗೋಳ, 16 : ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಉಗರಗೋಳ ವಲಯದ ವತಿಯಿಂದ ಜನಮಂಗಲ ಕಾರ್ಯಕ್ರಮದಡಿ ವಿಕಲಚೇತನ ಮಂಜುನಾಥ ಕಂಬಾರ ಅವರಿಗೆ ಶುಕ್ರವಾರ ವ್ಹೀಲ್ಚೇರ್ ವಿತರಣೆ ಮಾಡಲಾಯಿತು.
ಈ ವೇಳೆ ಒಕ್ಕೂಟದ ಅಧ್ಯಕ್ಷೆ ರೇಣುಕಾ ಬಡೆಪ್ಪನವರ ಮಾತನಾಡಿ, ಹಲವು ಕಷ್ಟಗಳ ವಧ್ಯೆಯೂ ಅಂಗವಿಕಲರು ಶ್ರಮವಹಿಸಿ ದುಡಿಯುತ್ತಿದ್ದಾರೆ. ಸ್ವಾಭಿಮಾನದ ಬದುಕು ಸಾಗಿಸುತ್ತಿದ್ದಾರೆ. ಅವರಿಗೆ ನೆರವಾಗಲೆಂದು ವಿವಿಧ ಸಾಧನ-ಸಲಕರಣೆಗಳನ್ನು ನೀಡುತ್ತಿರುವುದಾಗಿ ಹೇಳಿದರು. ಸವದತ್ತಿ ತಾಲ್ಲೂಕು ಯೋಜನಾಧಿಕಾರಿ ಸುಬ್ರಾಯ ನಾಯ್ಕ, ಮಮತಾ ವೈದ್ಯ, ಗಂಗಮ್ಮ ಮಡಿವಾಳರ, ಶ್ರುತಿ ಕಂಬಾರ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 