ಎರಡು ತಿಂಗಳ ಒಳಗಾಗಿ 466 ಪಶುವೈದ್ಯರ ನೇಮಕ:ಸಚಿವ ವೆಂಕಟರಾವ್ ನಾಡಗೌಡ
ಬೆಳಗಾವಿ: 14: ಮುಂದಿನ ಎರಡು ತಿಂಗಳೊಳಗಾಗಿ ರಾಜ್ಯದ ಪಶು ಸಂಗೋಪನಾ ಮತ್ತು ಪಶು ವೈದ್ಯ ಇಲಾಖೆಯಲ್ಲಿ ಖಾಲಿ ಇರುವ 466 ಪಶು ವೈದ್ಯರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭತರ್ಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನಾ ಹಾಗೂ ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ಅವರು ಸದನಕ್ಕೆ ಇಂದು ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ವಿ. ಸುನೀಲ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ನೇರ ನೇಮಕಾತಿ ಮೂಲಕ ಖಾಲಿ ಇರುವ ಹುದ್ದೆಗಳ ಭತರ್ಿಗೆ ಅನುಮತಿ ಕೋರಿ ಈಗಾಗಲೇ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಎರಡು ತಿಂಗಳ ಒಳಗಾಗಿ ನೇರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ 466 ಪಶು ವೈದ್ಯರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ನಿದರ್ೆಶಕರ ಹುದ್ದೆಗಳನ್ನು ಬಡ್ತಿ ಮೂಲಕ ನೇಮಕ ಮಾಡಿಕೊಳ್ಳಬೇಕಾಗಿದೆ. ಪಶು ವೈದ್ಯಾಧಿಕಾರಿಗಳಿಂದ ಸಹಾಯಕ ನಿದರ್ೆಶಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆಗೆ ಬಿ. ಕೆ. ಪವಿತ್ರ ಅವರು ಸುಪ್ರೀಂ ಕೋರ್ಟನಲ್ಲಿ ಸಲ್ಲಿಸಿರುವ ಬಡ್ತಿ ಮೀಸಲಾತಿ ಪ್ರಕರಣದ ಹಿನ್ನೆಲೆಯಲ್ಲಿ ಪಶು ವೈದ್ಯಾಧಿಕಾರಿಗಳಿಗೆ ಬಡ್ತಿ ನೀಡಲು ಸಾಧ್ಯವಾಗಿಲ್ಲ ಎಂದು ವಿವರಿಸಿದರು.
ಅಲ್ಲದೆ, ಮುಂಬಡ್ತಿ ಮೂಲಕ 171 ಜಾನುವಾರು ಅಭಿವೃದ್ಧಿ ಅಧಿಕಾರಿಗಳು, 212 ಜಾನುವಾರು ಅಧಿಕಾರಿಗಳು, 530 ಹಿರಿಯ ವೈದ್ಯಕೀಯ ಪಶುವೈದ್ಯಕೀಯ ಅಧಿಕಾರಿಗಳು, 514 ಪಶುವೈದ್ಯಕೀಯ ಪರೀಕ್ಷಕರು, 106 ಪಶುವೈದ್ಯಕೀಯ ಸಹಾಯಕರ ಹುದ್ದೆಗಳು ಹಾಗೂ ಲಿಪಿಕ ವೃಂದದ 77 ಹುದ್ದೆಗಳನ್ನು ಹಾಗೂ 30 ವಾಹನ ಚಾಲಕರ ಹುದೆಗಳನ್ನು ಭತರ್ಿ ಮಾಡಿಕೊಳ್ಳಲು ಯೋಜಿಸಲಾಗಿದೆ ಹೈದರಾಬಾದ್ ಕನರ್ಾಟಕ ಭಾಗದಲ್ಲಿ ಖಾಲಿ ಇರುವ ಡಿ ದಜರ್ೆ ಹುದ್ದೆಗಳ ನೇಮಕಾತಿಗೆ ವಿಶೇಷ ನೇಮಕಾತಿ ನಿಯಮಾವಳಿ ರಚಿಸಲು ಕ್ರಮವಹಿಸಲಾಗಿದೆ. ಪ್ರಸ್ತುತ ಹೊರ ಗುತ್ತಿಗೆ ಆಧಾರದ ಮೇಲೆ 1500 ಹುದ್ದೆಗಳ ಸೇವೆ ಪಡೆಯಲಾಗಿದೆ. ಅಂತೆಯೇ, 756 ಡಿ ಗ್ರೂಪ್ ಹುದ್ದೆಗಳನ್ನು ಹೆಚ್ಚುವರಿಯಾಗಿ ಹೊರ ಗುತ್ತಿಗೆ ಸೇವೆ ಪಡೆಯಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ವಿವರಿಸಿದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 