ಮಹಿಳೆಯರು ಸಬಲೀಕರಣದ ಶಕ್ತಿ ಒನಕೆ ಓಬವ್ವ: ತಹಶೀಲ್ದಾರ್
Women are the power behind empowerment: Tahsildar
ಬ್ಯಾಡಗಿ 12 : ಸ್ತ್ರೀ ಸಬಲೀಕರಣದ ಶಕ್ತಿ ವೀರವನಿತೆ ಒನಕೆ ಓಬವ್ವ. ಅವರ ಚರಿತ್ರೆ ತಿಳಿಯಲು ನಾವು ಪ್ರಯತ್ನಿಸಬೇಕು ಎಂದು ತಹಶಿಲ್ದಾರ ಚಂದ್ರಶೇಖರ್ ನಾಯ್ಕ ಅಭಿಪ್ರಾಯಪಟ್ಟರು. ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ವೀರವನಿತೆ ಒನಕೆ ಒಬ್ಬವ ಜಯಂತಿ ಕಾರ್ಯಕ್ರಮದಲ್ಲಿ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮಾತನಾಡಿದರು. ಗಂಡಿನ ಪ್ರತಿ ಸಾಧನೆಯ ಹಿಂದೆ ಹೆಣ್ಣಿನ ಶಕ್ತಿ ಇರುತ್ತದೆ ಎಂಬುವುದಕ್ಕೆ ಉದಾಹರಣೆ ಒನಕೆ ಓಬವ್ವ. ಒನಕೆಯಿಂದ ಶತ್ರುಗಳನ್ನು ಸದೆ ಬಡಿದಿದ್ದರು. ನಮ್ಮ ಕೆಲಸ ನಾವು ಪ್ರಾಮಾಣಿಕವಾಗಿ ಮಾಡಬೇಕು. ಮಹಿಳೆಯರು ಸ್ವಾವಲಂಬಿಗಳಾಗಬೇಕು. ಆಂತರಿಕವಾಗಿ ಬದಲಾಗಬೇಕು. ಸರ್ಕಾರದ ಹಲವು ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಪುರುಷರಿಗೆ ಸರಿ ಸಮಾನವಾಗಿ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.ಪುರಸಭೆ ಮಾಜಿ ಅಧ್ಯಕ್ಷ ಮುಖಂಡ ಮುರಿಗೆಪ್ಪ ಶೆಟ್ಟರ ಮಾತನಾಡಿ ‘ನಿಷ್ಠೆ, ತ್ಯಾಗ, ಧೈರ್ಯದ ಸಂಗಮ ಒನಕೆ ಓಬವ್ವ. 18ನೇ ಶತಮಾನದಲ್ಲಿ ರಾಷ್ಟ್ರೀಯತೆ ಎಂಬ ಪರಿಕಲ್ಪನೆಯೇ ಬಂದಿರದ ಸಮಯದಲ್ಲಿ ಒನಕೆ ಓಬವ್ವ ಚಿತ್ರದುರ್ಗದ ಕೋಟೆಯ ರಕ್ಷಣೆಗೆ ಹೋರಾಡಿದ್ದಾರೆ. ನಾವೆಲ್ಲ ಓಬವ್ವ ಅವರಿಂದ ಸ್ಫೂರ್ತಿ ಪಡೆಯಬೇಕು. ಛಲವಾದಿ ಸಮುದಾಯದವರು ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೆ ಹೋಗಬೇಕು’ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಬಿ ಸಿ ಎಂ ಅಧಿಕಾರಿ ಪ್ರಸಾದಿಮಠ.ಆರ್ ಎಂ ಕಡಕೋಳ.ನಾಗರಾಜ ಗುಳೇರ.ಎಸ್ ಆರ್ ಹೀರೆಮಠ.ಹಾಗು ತಹಶೀಲ್ದಾರ್ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 