ಮಹಿಳೆಯರು ಸೃಜನಾತ್ಮಕ ಕೌಶಲ್ಯ ಬೆಳೆಸಿಕೊಳ್ಳಬೇಕು: ಗೀರೀಶ್.ವಿ ಕುಲಕರ್ಣಿ
Women should develop creative skills: Girish.V Kulkarni
ಮಹಿಳೆಯರು ಸೃಜನಾತ್ಮಕ ಕೌಶಲ್ಯ ಬೆಳೆಸಿಕೊಳ್ಳಬೇಕು: ಗೀರೀಶ್.ವಿ ಕುಲಕರ್ಣಿ
ಬಳ್ಳಾರಿ 31: ಮಹಿಳಾ ಸಬಲೀಕರಣ ಸಮಾಜದಲ್ಲಿ ಬಹುಮುಖ್ಯವಾಗಿದ್ದು, ಮಹಿಳೆಯರು ವಿವಿಧ ರೀತಿಯ ಸ್ವ-ಉದ್ಯೋಗ ಮಾಡಲು ಸೃಜನಾತ್ಮಕ ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದು ಕೆನರಾ ಬ್ಯಾಂಕ್ನ ಲೀಡ್ ಡಿಸ್ಟ್ರೀಕ್ ಮ್ಯಾನೇಜರ್ ಗೀರೀಶ ವಿ ಕುಲಕರ್ಣಿ ಅವರು ಹೇಳಿದರು.
ಕೆನರಾ ಬ್ಯಾಂಕ್ ವತಿಯಿಂದ ಉಚಿತ ಹೊಲಿಗೆ ಯಂತ್ರ ತರಬೇತಿ ಹೊಂದಿದ ಮಹಿಳೆಯರಿಗೆ ಸಂಸ್ಥೆಯ ಆವರಣದಲ್ಲಿ ಮಂಗಳವಾರ ಟೂಲ್ಕಿಟ್ ವಿತರಿಸಿ ಅವರು ಮಾತನಾಡಿದರು.ಮಹಿಳೆಯರು ಮನೆಯಲ್ಲಿ ಕುಳಿತು ಟೈಲರಿಂಗ್ ಮಾಡುವುದರಿಂದ ಸ್ವಾವಲಂಬಿ ಜೀವನ ರೂಪಿಸಿಕೊಳ್ಳುತ್ತಾರೆ ಹಾಗೂ ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಈ ಹೋಲಿಗೆ ತರಬೇತಿ ಸಹಕಾರಿಯಾಗಲಿದೆ ಎಂದರು.
ಕೆನರಾ ಬ್ಯಾಂಕ್ನ ವಿಭಾಗೀಯ ಪ್ರಬಂಧಕರಾದ ಮಾಲತಿ ಅವರು ಮಾತನಾಡಿ, ಮಹಿಳೆಯರು ಮನೆಯಲ್ಲಿ ಟೈಲರಿಂಗ್ ಮಾಡಿಕೊಂಡು ಆರ್ಥಿಕವಾಗಿ ಕುಟುಂಬ ನಿರ್ವಹಣೆಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.ನಿರ್ದೇಶಕರಾದ ರಾಜೆಸಾಬ್.ಎಚ್ ಎರಿಮನಿ ಮಾತನಾಡಿ, ಸಂಸ್ಥೆಯ ತರಬೇತಿಯಲ್ಲಿ ಕೌಶಲ್ಯದ ಜೊತೆಗೆ ಆತ್ಮವಿಶ್ವಾಸ, ವ್ಯಕ್ತಿತ್ವ ವಿಕಸನದ ಮಾಹಿತಿ ನೀಡಲಾಗುತ್ತಿದ್ದು, ತಮ್ಮ ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ನ ಎನ್ಆರ್ಎಲ್ಎಂ ಘಟಕದ ರಾಜೇಂದ್ರ ವಿಜಯ ಕುಮಾರ ಸೇರಿದಂತೆ ಜಡೆಪ್ಪ, ದಿನೇಶ, ಸಿದ್ದಲಿಂಗಮ್ಮ, ಮಂಜುಳಾ, ಸಂತೋಷ ಕುಮಾರ್, ಕಿರಣ ಕುಮಾರ ಹಾಗೂ ಶಿಭಿರಾರ್ಥಿಗಳು ಇದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 