ಪಟ್ಟಣದ ಸಾರಿಗೆ ವಿಭಾಗೀಯ ಘಟಕದಲ್ಲಿ ವಿಶ್ವ ಪರಿಸರ ದಿನಾಚರಣೆ
World Environment Day celebrated at the town's transport divisional unit
ಪಟ್ಟಣದ ಸಾರಿಗೆ ವಿಭಾಗೀಯ ಘಟಕದಲ್ಲಿ ವಿಶ್ವ ಪರಿಸರ ದಿನಾಚರಣೆ
ಬ್ಯಾಡಗಿ 09: ಪರಿಸರ ಸಂರಕ್ಷ ಣೆ ಮತ್ತು ನೈಸರ್ಗಿಕ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಾಮೂಹಿಕ ಜವಾಬ್ದಾರಿ ಪ್ರದರ್ಶಿಸಬೇಕಿದೆ ಎಂದು ವಿಭಾಗೀಯ ಅಧಿಕಾರಿ ಅಶೋಕ್ ಪಾಟೀಲ ಹೇಳಿದರು. ಪಟ್ಟಣದ ಸಾರಿಗೆ ವಿಭಾಗೀಯ ಘಟಕದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಮೂಲಕ ಮಾತನಾಡಿದವರು ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು. ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲ ಬೇಗೆ ಕಡಿಮೆಯಾಗಿ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ. ಪರಿಸರದ ಸೌಂದರ್ಯವೂ ಹೆಚ್ಚಾಗಲಿದೆ. ಮುಂದಿನ ಪೀಳಿಗೆಗೆ ಪರಿಸರ ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಮನೆಯ ಸುತ್ತಲೂ ಗಿಡಗಳನ್ನು ಬೆಳೆಸುವುದಲ್ಲದೇ ಮನೆಯಲ್ಲಿ ಬಳಸಿದ ನೀರನ್ನು ಮರು ಬಳಕೆ ಮಾಡಬೇಕು’ ಎಂದು ಸಲಹೆ ನೀಡಿದರು.ಈ ವೇಳ ಘಟಕ ವ್ಯವಸ್ಥಾಪಕರು ಜಿ ಬಿ ಅಡರಕಟ್ಟಿ ಮಾತನಾಡಿ ಪರಿಸರ ಉತ್ತಮವಾಗಿದ್ದರೆ ಆರೋಗ್ಯಕರ ಜೀವನ ಸಾಗಿಸಬಹುದು. ಪ್ರಾಣಿ, ಪಕ್ಷಿಗಳು ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯೆಗಳಿಗಾಗಿ ಪರಿಸರ ಅವಲಂಬಿಸಿದೆ. ಪ್ಲಾಸ್ಟಿಕ್ ಮಾಲಿನ್ಯ ದೂರವಾಗಿಸಿ ಪರಿಸರವನ್ನು ರಕ್ಷಿಸಬೇಕು ಎಂದರು.ಈ ಸಂದರ್ಭದಲ್ಲಿ ತಾಂತ್ರಿಕ ವಿಭಾಗದ ಸಿಬ್ಬಂದಿಗಳು ಚಾಲಕರು ಹಾಗೂ ನಿರ್ವಾಹಕರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 