ಹವ್ಯಕ ಕ್ಷೇಮಾಭಿವೃದ್ಧಿ ಸಂಘದಿಂದ ಯಜ್ಞೋಪವೀತ ಧಾರಣ ಕಾರ್ಯಕ್ರಮ
Yajna Paveeta Dharana program by Havyaka Welfare Development Association
ಹವ್ಯಕ ಕ್ಷೇಮಾಭಿವೃದ್ಧಿ ಸಂಘದಿಂದ ಯಜ್ಞೋಪವೀತ ಧಾರಣ ಕಾರ್ಯಕ್ರಮ
ಬೆಳಗಾವಿ 10: ಇಲ್ಲಿನ ಹವ್ಯಕ ಕ್ಷೇಮಾಭಿವೃದ್ಧಿ ಸಂಘದಿಂದ ಶನಿವಾರ ಸಂಘದಿಂದ ಯಜ್ಞೋಪವೀತ ಧಾರಣ ಕಾರ್ಯಕ್ರಮ ನಡೆಯಿತು.ಕೃಷ್ಣ ದೇವರಾಯ ವೃತ್ತದ ಗೀತ ಗಂಗಾ ಕಟ್ಟಡದಲ್ಲಿ ನಡೆದ ಕಾರ್ಯಕ್ರಮವನ್ನು ಸಮಾಜದ ಹಿರಿಯರಾದ ವಿ.ಎನ್.ಹೆಗಡೆ ಉದ್ಘಾಟಿಸಿದರು. ಹವ್ಯಕ ಬ್ರಾಹ್ಮಣ ಸಮಾಜದ ಪುರುಷರು ಜನಿವಾರ ಧರಿಸಿದರು. ಇದೇ ವೇಳೆ ಮಹಿಳೆಯರಿಗೆ ರಂಗವಲ್ಲಿ ಸ್ಫರ್ಧೆ ಸಹ ನಡೆಯಿತು. ನಂತರ ಸಂಘದ ವಾರ್ಷಿಕ ಸರ್ವಸಾಮಾನ್ಯ ಸಭೆ ನಡೆಸಲಾಯಿತು. ಹೊಸ ಸದಸ್ಯರನ್ನು ಪರಿಚಯಿಸಲಾಯಿತು. ಎ.ಕೆ.ಭಟ್ ಭಾರತ ಮಾತೆಗೆ ಪೂಜೆ ಸಲ್ಲಿಸಿದರು. ಸಾಮೂಹಿಕ ಪ್ರಾರ್ಥನಾ ಶ್ಲೋಕ ಪಠಿಸಲಾಯಿತು. ಸಂಘದ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲಾಯಿತು.ಉಪಾಧ್ಯಕ್ಷ ಗಣೇಶ ಹೆಗಡೆ, ಕಾರ್ಯದರ್ಶಿ ಸಿ.ಜಿ. ಶಾಸ್ತ್ರಿ, ಖಜಾಂಚಿ ಸೀತಾರಾಮ ಭಾಗ್ವತ, ಕಾರ್ಯಕಾರಿಣಿ ಸದಸ್ಯರಾದ ಎಂ.ಕೆ.ಹೆಗಡೆ, ವಿದ್ಯಾ ಹೆಗಡೆ, ವಸುಮತಿ ಹೆಗಡೆ ಮೊದಲಾದವರು ಇದ್ದರು.ಪರಮೇಶ್ವರ ಹೆಗಡೆ ಸ್ವಾಗತಿಸಿದರು. ಸಂಘದ ಅಧ್ಯಕ್ಷೆ ಪೂರ್ಣಿಮಾ ಹೆಗಡೆ ಪ್ರಸ್ತಾವಿಕ ಮಾತನಾಡಿದರು. ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 