ಯಲುಬುರ್ಗಾ: ಕಲ್ಲಭಾವಿ ಕೆರೆ ಅಭಿವೃದ್ಧಿಗೆ ಮರಕಟ್ ಗ್ರಾಮಸ್ಥರಿಂದ ದೇಣಿಗೆ: ಸೇವಾ ಸಮಿತಿ ಅದ್ಯಕ್ಷ ರಾಚಪ್ಪ ಹೇಳಿಕೆ
ಲೋಕದರ್ಶನ ವರದಿ
ಯಲುಬುರ್ಗಾ 28: ತಾಲೂಕಿನ ಕಲ್ಲಭಾವಿ ಕೆರೆ ಹೂಳೆತ್ತುವ ಕಾಮಗಾರಿ ಅತ್ಯಂತ ಭರದಿಂದ ಸಾಗಿದ್ದು ಪ್ರತಿದಿನ ದಾನಿಗಳು ಆಗಮಿಸಿ ಸಹಾಯ ಸಹಕಾರ ನೀಡುತ್ತಿದ್ದು ಕೆರೆ ಅಭಿವೃದ್ಧಿಯಾಗುತ್ತಿದೆ ಎಂದು ಕಲ್ಲಭಾವಿ ಕೆರೆ ಸೇವಾ ಸಮಿತಿ ಅದ್ಯಕ್ಷ ರಾಚಪ್ಪ ಹುಳ್ಳಿ ಹೇಳಿದರು.
ತಾಲೂಕಿನ ಮರಕಟ್ ಗ್ರಾಮಸ್ಥರು ನೀಡಿದ ದೇಣಿಗೆಯನ್ನು ಸ್ವೀಕರಿಸಿ ಅವರು ಮಾತನಾಡಿದರು.
ತಾಲೂಕು ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ದಾನಿಗಳು ಕೆರೆ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದು ಉತ್ತಮವಾದ ಬೆಳವಣಿಗೆಯಾಗಿದೆ ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಗಳ ಆಶಿವರ್ಾದಿಂದ ಇಂದು ನಮ್ಮೂರ ಕೆರೆ ಅಭಿವೃದ್ಧಿಯಾಗುತ್ತಿದೆ ಮಳೆಯಾದರೆ ಸಾಕಷ್ಟು ನೀರು ಸಂಗ್ರಹವಾಗಿ ಸುತ್ತ ಮುತ್ತಲಿನ ಜಮಿನುಗಳಿಗೆ ಅಂತರ್ಜಲ ಮಟ್ಟ ಹೆಚ್ಚಾಗುವದರ ಜೊತೆಗೆ ರೈತರು ಉತ್ತಮವಾದ ಬೆಳೆ ಬೆಳೆಯಲು ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕೆರೆ ಸೇವಾ ಸಮಿತಿಯ ಸದಸ್ಯರಾದ ವಿಜಯಕುಮಾರ ತಾಳಕೇರಿ, ಪಾಲಾಕ್ಷಪ್ಪ ಕಲ್ಲಭಾವಿ, ಮರಕಟ್ ಗ್ರಾಮದ ಬಸವರಾಜ, ಮಹಾಲಿಂಗಪ್ಪ, ಹನುಮಗೌಡ, ಯಮನೂರಪ್ಪ ಹಾವೇರಿ, ನಿಂಗಪ್ಪ ಹರಿಜನ, ಕುಮಾರಪ್ಪ ಮಾಟಲದಿನ್ನಿ ಸೇರಿದಂತೆ ಅನೇಕರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 