ಜಗತ್ತಿಗೆ ಯೋಗ ಭಾರತದ ಶ್ರೇಷ್ಠ ಕೊಡುಗೆ
ಲೋಕದರ್ಶನ ವರದಿ
ಅಥಣಿ 01: ಋಷಿ ಮುನಿಗಳ ನಾಡಾದ ಭಾರತದಲ್ಲಿ ಯೋಗ ಪ್ರಾಚೀನ ಕಾಲದಿಂದಲೂ ತನ್ನ ಮಹತ್ವವನ್ನು ಉಳಿಸಿಕೊಂಡು ಬಂದಿದ್ದು, ಇಂದು ಈಡೀ ಜಗತ್ತೇ ಭಾರತದತ್ತ ಹೊರಳಿ ನೋಡುವಂತೆ ಮಾಡಿದೆ ಎಂದು ಜೆ.ಇ ಶಿಕ್ಷಣ ಸಂಸ್ಥೆಯ ಕಾಯರ್ಾಧ್ಯಕ್ಷರಾದ ಅರವಿಂದರಾವ ದೇಶಪಾಂಡೆ ಹೇಳಿದರು.
ಇಲ್ಲಿಯ ಭೋಜರಾಜ ಕ್ರೀಡಾಂಗಣದಲ್ಲಿ ಶ್ವಾಸಗುರು ಶ್ರೀ ವಚನಾನಂದ ಅವರು ನಡೆಸಿಕೊಡುತ್ತಿರುವ ಯೋಗ ಶಿಬಿರದ ಉದ್ಘಾಟನೆಯನ್ನು ಸಸಿಗೆ ನೀರೆರೆಯುವ ಮೂಲಕ ನಡೆಸಿಕೊಡುತ್ತ, ಮೇಲಿನಂತೆ ಮಾತನಾಡಿ, ಹೊರದೇಶಗಳಿಗೆ ಭಾರತದಿಂದ ಯೋಗ ಶಿಕ್ಷಕರನ್ನು ತರಬೇತಿಗೊಳಿಸಿ ಕೊಡುವ ತುಂಬ ಮಹತ್ವದ ಜವಾಬ್ದಾರಿ ಭಾರತದ ಮೇಲಿದೆ ಎಂದರು.
ಶ್ವಾಸ ಗುರು ವಚನಾನಂದ ಸ್ವಾಮೀಜಿ ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಈ ಸಮಯದಲ್ಲಿ ಪತಂಜಲಿ ಯೋಗ ಪೀಠದ ಕೃಷಿ ರಾಜ್ಯ ಪ್ರಭಾರಿ ಸಂಜಯ ಕುಸ್ತಿಗಾರ, ಯೋಗಶಿಕ್ಷಕರಾದ ಎಂ ಎ ಪಾಟೀಲ, ಶಿವಪುತ್ರ ಯಾದವಾಡ, ಅಜರ್ುನ ದೇವರು, ಸದಾಶಿವ ಚಿಕ್ಕಟ್ಟಿ, ಅಶೋಕ ಜಗದೇವ, ಶಿವಾನಂದ ಮಾಲಗಾಂವಿ ಉಪಸ್ಥಿತರಿದ್ದರು.ಯೋಗ ಗುರು ಎಸ್ ಕೆ ಹೊಳೆಪ್ಪನವರ ಸ್ವಾಗತಿಸಿದರು. ಡಾ ಆರ್ ಎಸ್ ದೊಡ್ಡನಿಂಪ್ಪಗೋಳ ನಿರೂಪಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 