ಭ್ರಷ್ಟಾಚಾರ ರಹಿತ ನಾಡ ಕಟ್ಟಲು ಯುವ ಜನತೆ ಮುಂದಾಗಬೇಕು: ವಡಗೇರಿ
ಹಾವೇರಿ: ಭ್ರಷ್ಟಾಚಾರ ರಹಿತ ನಾಡಕಟ್ಟಲು ಯುವ ಜನತೆ ಮುಂದಾಗಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ ಅವರು ಹೇಳಿದರು.
ಮಂಗಳವಾರ ಮುನ್ಸಿಪಲ್ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪಧರ್ೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು.
ನಂತರ ಮಾತನಾಡಿ ಅವರು ಯುವ ಸಂಸತ್ ಪ್ರಸಕ್ತ ರಾಜಕೀಯದ ಮೇಲೆ ಬೆಳಕು ಚೆಲ್ಲುವ ಹಾಗೂ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚಚರ್ಿಸುವ ವೇದಿಕೆಯಾಗಬೇಕು ಎಂದು ಹೇಳಿದರು.
ಯುವ ಸಂಸತ್ ಕಾರ್ಯಕ್ರಮ ಆಯೋಜನೆಯಿಂದ ಜನಪ್ರತಿನಿಧಿಗಳು ಸಮಾಜದಲ್ಲಿ ಮತ್ತು ಸದನದಲ್ಲಿ ಹೇಗೆ ವತರ್ಿಸಬೇಕು ಹಾಗೂ ಅವರ ಕರ್ತವ್ಯಗಳು ಏನು ಎನ್ನುವ ಬಗೆಗೆ ಯುವ ಜನರಿಗೆ ತಿಳುವಳಿಕೆ ನೀಡುವ ಕಾರ್ಯಕ್ರಮವಾಗಿದೆ.
ಒಂದೊಮ್ಮೆ ನೀವು ಜನಪ್ರತಿನಿಧಿಗಲಾಗಿ ಆಯ್ಕೆಯಾದಲ್ಲಿ ಜನರೊಂದಿಗೆ ಹಾಗೂ ಸಂಸತ್ತಿನ ಹೊರ ಒಳಗೆ ಹೇಗೆ ನಡೆದುಕೊಳ್ಳಬೇಕು ಎಂಬ ಮಾದರಿಯನ್ನು ಈ ಕಾರ್ಯಕ್ರಮ ನಿಮಗಗೆ ತಿಳುವಳಿಕೆ ನೀಡುತ್ತದೆ ಎಂದು ಹೇಳಿದರು.
ಎಸ್.ಜಿ.ಕೋಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸವಣೂರ ಬಿಇಒ ಸುಧಾಕರ ಎನ್.ಎಸ್., ಆರ್.ಎಂ.ಎಸ್.ಎ. ಸುನಿತಾ, ಅಕ್ಷರ ದಾಸೋಹ ಸಹಾಯಕ ನಿದರ್ೆಶಕ ಎಸ್.ಎಸ್.ಅಡಿಗ, ವಿಜ್ಞಾನ ಪರೀವಿಕ್ಷಕ ಎಸ್.ಐ.ಮೂಡಲದವರ, ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಮಂಜಪ್ಪ ಆರ್., ಈರಪ್ಪ ಲಮಾಣಿ, ಮುನ್ಸಿಪಲ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶೋಭಾ ಜಾಗಟಘೇರಿ, ನಿವೃತ್ತ ಶಿಕ್ಷಕ ಹನುಮಂತಗೌಡ ಗೊಲ್ಲರ, ವಿಜಯಲಕ್ಷ್ಮೀ ಕಮ್ಮಾರ, ವಿ.ಡಿ.ಹಿತ್ತಲಮನಿ ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 