ಅಗ್ನಿವೀರ ಸೇನೆಗೆ ಆಯ್ಕೆಯಾದ ಯುವಕರಿಗೆ ಸನ್ಮಾನ
Youth selected for Agniveer Sena felicitated
ಕಾಗವಾಡ, 09 : ನಮ್ಮ ಗ್ರಾಮದ ಯುವಕರು ದೇಶದ ಸೇವೆ ಮಾಡಲು, ಭಾರತೀಯ ಸೇನೆಯಲ್ಲಿ ಅಗ್ನಿವೀರರಾಗಿ ಆಯ್ಕೆಯಾಗಿರಿವುದು ಇಡೀ ಗ್ರಾಮವೇ ಹೆಮ್ಮೆ ಪಡುವ ವಿಷಯವಾಗಿದೆ ಎಂದು ಜೂಗೂಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಕಾಸಾಬ ಪಾಟೀಲ್ ಹೇಳಿದರು. ಅವರು ಮಂಗಳವಾರ ದಿ. 09 ರಂದು ತಾಲೂಕಿನ ಜೂಗೂಳ ಗ್ರಾಮ ಪಂಚಾಯಿತಿ ವತಿಯಿಂದ ಸೇನೆಯಲ್ಲಿ ಅಗ್ನಿವೀರರಾಗಿ ಆಯ್ಕೆಗೊಂಡ 3 ಯುವಕರನ್ನು ಸನ್ಮಾನಿಸಿ ಮಾತನಾಡುತ್ತಿದ್ದರು.
ಗ್ರಾಮದ ಓಂಕಾರ್ ಸುಂಕೆ ಈತನು ಈಗಾಗಲೇ ತರಬೇತಿ ಮುಗಿಸಿ ಗ್ರಾಮಕ್ಕೆ ಹಿಂದಿರುಗಿದ್ದು ಅದರಂತೆ ಸರ್ವೇಶ್ ದೇಸಾಯಿ ಮತ್ತು ರವೀಂದ್ರ ವಸೇದಾರ ತರಬೇತಿಗೆ ಪಡೆಯಲು ತೆರಳುತ್ತಿದ್ದಾರೆ. ಅವರ ದೇಶ ಸೇವೆ ಯಶಸ್ವಿಯಾಗಲಿ ಎಂದು ಹಾರೈಸಿದರು. ಈ ವೇಳೆ ಮುಖಂಡರಾದ ರಾಜು ಪಾಟೀಲ್, ಉದಯ ದೇಸಾಯಿ, ಬಾಬಾಸಾಬ್ ತಾರದಾಳೆ, ಮಹಾದೇವ ಕಾಂಬಳೆ, ನಿತಿನ್ ಪಾಟೀಲ್, ಅವಿನಾಶ್ ಪಾಟೀಲ್, ಪಿಡಿಒ ಶಿಲ್ಪಾ ನಾಯಿಕವಾಡಿ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 