ಯುವಜನಾಂಗ ಧರ್ಮಪಾಲನೆಯಲ್ಲಿ ಸಕ್ರಿಯರಾಗಬೇಕು : ದುಂಡಿಗೌಡ್ರ
Youth should become active in religious activities: Dundigowdra
ಶಿಗ್ಗಾವಿ 03: ಧರ್ಮ ಪಾಲನೆಯಿಂದ ಸುಖಶಾಂತಿ ನೆಮ್ಮದಿ ಸಾಧ್ಯ ಎಂದು ಭರತ್ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ತಾಲೂಕಿನ ತೋಟದ ಹುನಗುಂದ ಗ್ರಾಮದಲ್ಲಿ ಜರುಗಿದ ಶ್ರೀ ಗ್ರಾಮದೇವಿ ನೂತನ ದೇವಸ್ಥಾನದ ಕಳಸಾರೋಹಣ ಹಾಗೂ ಪ್ರತಿಷ್ಠಾಪನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಧಾರ್ಮಿಕತೆಗೆ ಜಗತ್ತಿನಲ್ಲಿ ಖ್ಯಾತಿ ಪಡೆದಿರುವ ದೇಶ ಭಾರತ ಆ ನಿಟ್ಟಿನಲ್ಲಿ ದೇವಸ್ಥಾನಗಳ ಜಿರ್ಣೋದ್ದಾರ ಮಾಡುವ ಮೂಲಕ ಧಾರ್ಮಿಕತೆಯನ್ನು ಹೆಚ್ಚಿನ ರೀತಿಯಲ್ಲಿ ಉಳಿಸಿಕೊಂಡು ಹೋಗುವ ಕೆಲಸವಾಗುತ್ತಿವೆ ಎಂದರು. ಇಂದಿನ ದಿನಮಾನಗಳಲ್ಲಿ ತಂದೆ ತಾಯಿಗಳ ಅನುಕರಣೆಯಿಂದ ಮನೆಯಲ್ಲಿರುವ ಮಕ್ಕಳು ಕೂಡಾ ದಾರ್ಮಿಕತೆಯನ್ನು ಆಚರಿಸಿ ತಮ್ಮ ಬದುಕನ್ನು ಸಾರ್ಥಕಗೊಳಿಸುವ ಮೂಲಕ ಯುವಜನಾಂಗ ಧರ್ಮಪಾಲನೆಯಲ್ಲಿ ಸಕ್ರಿಯವಾಗಬೆಕೆಂದರು ಹೇಳಿದರು. ಈ ಸಂದರ್ಭದಲ್ಲಿ ಕೆ.ಎಮ್.ಎಫ್ ನಿರ್ದೇಶಕ ತಿಪ್ಪಣ್ಣ ಸಾತಣ್ಣನವರ, ಗ್ರಾಮ ಪಂಚಾಯತಿ ಅದ್ಯಕ್ಷೆ ಲಕ್ಷ್ಮವ್ವ ತಳವಾರ, ಉಪಾದ್ಯಕ್ಷ ನಾಗರಾಜ ಮೂಲಿಮನಿ, ದೇವಸ್ಥಾನದ ಕಮೀಟಿ ಪಧಾದಿಕಾರಿಗಳು, ಗ್ರಾ.ಪಂ ಸರ್ವ ಸದಸ್ಯರು ಸೇರಿದಂತೆ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 