ಯುವಜನಾಂಗ ಧರ್ಮಪಾಲನೆಯಲ್ಲಿ ಸಕ್ರಿಯರಾಗಬೇಕು : ದುಂಡಿಗೌಡ್ರ
Youth should become active in religious activities: Dundigowdra
ಶಿಗ್ಗಾವಿ 03: ಧರ್ಮ ಪಾಲನೆಯಿಂದ ಸುಖಶಾಂತಿ ನೆಮ್ಮದಿ ಸಾಧ್ಯ ಎಂದು ಭರತ್ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ತಾಲೂಕಿನ ತೋಟದ ಹುನಗುಂದ ಗ್ರಾಮದಲ್ಲಿ ಜರುಗಿದ ಶ್ರೀ ಗ್ರಾಮದೇವಿ ನೂತನ ದೇವಸ್ಥಾನದ ಕಳಸಾರೋಹಣ ಹಾಗೂ ಪ್ರತಿಷ್ಠಾಪನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಧಾರ್ಮಿಕತೆಗೆ ಜಗತ್ತಿನಲ್ಲಿ ಖ್ಯಾತಿ ಪಡೆದಿರುವ ದೇಶ ಭಾರತ ಆ ನಿಟ್ಟಿನಲ್ಲಿ ದೇವಸ್ಥಾನಗಳ ಜಿರ್ಣೋದ್ದಾರ ಮಾಡುವ ಮೂಲಕ ಧಾರ್ಮಿಕತೆಯನ್ನು ಹೆಚ್ಚಿನ ರೀತಿಯಲ್ಲಿ ಉಳಿಸಿಕೊಂಡು ಹೋಗುವ ಕೆಲಸವಾಗುತ್ತಿವೆ ಎಂದರು. ಇಂದಿನ ದಿನಮಾನಗಳಲ್ಲಿ ತಂದೆ ತಾಯಿಗಳ ಅನುಕರಣೆಯಿಂದ ಮನೆಯಲ್ಲಿರುವ ಮಕ್ಕಳು ಕೂಡಾ ದಾರ್ಮಿಕತೆಯನ್ನು ಆಚರಿಸಿ ತಮ್ಮ ಬದುಕನ್ನು ಸಾರ್ಥಕಗೊಳಿಸುವ ಮೂಲಕ ಯುವಜನಾಂಗ ಧರ್ಮಪಾಲನೆಯಲ್ಲಿ ಸಕ್ರಿಯವಾಗಬೆಕೆಂದರು ಹೇಳಿದರು. ಈ ಸಂದರ್ಭದಲ್ಲಿ ಕೆ.ಎಮ್.ಎಫ್ ನಿರ್ದೇಶಕ ತಿಪ್ಪಣ್ಣ ಸಾತಣ್ಣನವರ, ಗ್ರಾಮ ಪಂಚಾಯತಿ ಅದ್ಯಕ್ಷೆ ಲಕ್ಷ್ಮವ್ವ ತಳವಾರ, ಉಪಾದ್ಯಕ್ಷ ನಾಗರಾಜ ಮೂಲಿಮನಿ, ದೇವಸ್ಥಾನದ ಕಮೀಟಿ ಪಧಾದಿಕಾರಿಗಳು, ಗ್ರಾ.ಪಂ ಸರ್ವ ಸದಸ್ಯರು ಸೇರಿದಂತೆ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 