ಯುವಜನಾಂಗ ಧರ್ಮಪಾಲನೆಯಲ್ಲಿ ಸಕ್ರಿಯರಾಗಬೇಕು : ದುಂಡಿಗೌಡ್ರ
Youth should become active in religious activities: Dundigowdra
ಶಿಗ್ಗಾವಿ 03: ಧರ್ಮ ಪಾಲನೆಯಿಂದ ಸುಖಶಾಂತಿ ನೆಮ್ಮದಿ ಸಾಧ್ಯ ಎಂದು ಭರತ್ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ತಾಲೂಕಿನ ತೋಟದ ಹುನಗುಂದ ಗ್ರಾಮದಲ್ಲಿ ಜರುಗಿದ ಶ್ರೀ ಗ್ರಾಮದೇವಿ ನೂತನ ದೇವಸ್ಥಾನದ ಕಳಸಾರೋಹಣ ಹಾಗೂ ಪ್ರತಿಷ್ಠಾಪನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಧಾರ್ಮಿಕತೆಗೆ ಜಗತ್ತಿನಲ್ಲಿ ಖ್ಯಾತಿ ಪಡೆದಿರುವ ದೇಶ ಭಾರತ ಆ ನಿಟ್ಟಿನಲ್ಲಿ ದೇವಸ್ಥಾನಗಳ ಜಿರ್ಣೋದ್ದಾರ ಮಾಡುವ ಮೂಲಕ ಧಾರ್ಮಿಕತೆಯನ್ನು ಹೆಚ್ಚಿನ ರೀತಿಯಲ್ಲಿ ಉಳಿಸಿಕೊಂಡು ಹೋಗುವ ಕೆಲಸವಾಗುತ್ತಿವೆ ಎಂದರು. ಇಂದಿನ ದಿನಮಾನಗಳಲ್ಲಿ ತಂದೆ ತಾಯಿಗಳ ಅನುಕರಣೆಯಿಂದ ಮನೆಯಲ್ಲಿರುವ ಮಕ್ಕಳು ಕೂಡಾ ದಾರ್ಮಿಕತೆಯನ್ನು ಆಚರಿಸಿ ತಮ್ಮ ಬದುಕನ್ನು ಸಾರ್ಥಕಗೊಳಿಸುವ ಮೂಲಕ ಯುವಜನಾಂಗ ಧರ್ಮಪಾಲನೆಯಲ್ಲಿ ಸಕ್ರಿಯವಾಗಬೆಕೆಂದರು ಹೇಳಿದರು. ಈ ಸಂದರ್ಭದಲ್ಲಿ ಕೆ.ಎಮ್.ಎಫ್ ನಿರ್ದೇಶಕ ತಿಪ್ಪಣ್ಣ ಸಾತಣ್ಣನವರ, ಗ್ರಾಮ ಪಂಚಾಯತಿ ಅದ್ಯಕ್ಷೆ ಲಕ್ಷ್ಮವ್ವ ತಳವಾರ, ಉಪಾದ್ಯಕ್ಷ ನಾಗರಾಜ ಮೂಲಿಮನಿ, ದೇವಸ್ಥಾನದ ಕಮೀಟಿ ಪಧಾದಿಕಾರಿಗಳು, ಗ್ರಾ.ಪಂ ಸರ್ವ ಸದಸ್ಯರು ಸೇರಿದಂತೆ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 