ಸಂಗನಕೇರಿ :ಮಹಾನ ಪುರುಷರ ಸಾಮೂಹಿಕ ಜಯಂತಿ ಅಭಿನಂದನಾರ್ಹ: ಬಾಲಚಂದ್ರ
ಘಟಪ್ರಭಾ 03: ಎಲ್ಲ ಮಹಾನ್ ಪುರುಷರ ಜಯಂತಿಗಳನ್ನು ಒಂದೇ ದಿನ ಆಚರಿಸುವ ಮೂಲಕ ಸಂಗನಕೇರಿ ಗ್ರಾಮಸ್ಥರು ಇತರರಿಗೆ ಮಾದರಿಯಾಗಿದ್ದಾರೆ. ವಿಶಿಷ್ಠ ಹಾಗೂ ವಿನೂತನ ಕಾರ್ಯಕ್ರಮ ಮಹಾನ್ ಪುರುಷರ ಸಾಮೂಹಿಕ ಜಯಂತಿ ಕಾರ್ಯಕ್ರಮಗಳು ಎಲ್ಲಡೆ ಒಂದೇ ವೇದಿಕೆಯಲ್ಲಿ ಆಚರಿಸುವಂತಾಗಬೇಕು ಎಂದು ಅರಭಾಂವಿ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಇಲ್ಲಿಗೆ ಸಮೀಪದ ಸಂಗನಕೇರಿ ಗ್ರಾಮದಲ್ಲಿ ರವಿವಾರದಂದು ಸಂಜೆ ಹಣಮಂತ ದೇವರ ದೇವಸ್ಥಾನದಲ್ಲಿ ಗ್ರಾಮಸ್ಥರು ಹಮ್ಮಿಕೊಂಡಿದ್ದ ಮಹಾನ ಪುರುಷರ ಸಾಮೂಹಿಕ ಜಯಂತಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾತಿ, ಮತ, ಪಂಥ ಎಂಬ ಭೇದ-ಭಾವವಿಲ್ಲದೇ ಗ್ರಾಮಸ್ಥರು ಎಲ್ಲ ಸಮಾಜಗಳನ್ನು ಒಗ್ಗೂಡಿಸಿ ಏಕತೆಯಿಂದ ಸಾಮೂಹಿಕವಾಗಿ ಜಯಂತಿ ಕಾರ್ಯಕ್ರಮ ಆಯೋಜಿಸಿರುವುದು ಅಭಿನಂದನಾರ್ಹವಾಗಿದೆ ಎಂದು ಹೇಳಿದರು.
ಮಹಾನ್ ಪುರುಷರನ್ನು ಕೇವಲ ಒಂದೇ ಜಾತಿಗೆ ಸೀಮಿತಗೊಳಿಸಬೇಡಿ. ಎಲ್ಲ ಮಹಾನ ಪುರುಷರು ಮಾನವತೆಯ ನೆಲಗಟ್ಟಿನ ಮೇಲೆ ಸರ್ವ ಜನಾಂಗಕ್ಕೂ ಒಳಿತನ್ನು ಬಯಸಿದ್ದಾರೆ. 12ನೇ ಶತಮಾನದಲ್ಲಿ ಬಸವಾದಿ ಶರಣರು ಸಮಾನತೆಗಾಗಿ ಹೋರಾಟ ನಡೆಸಿ ಸರ್ವರಿಗೂ ಸಮಬಾಳು ಹಾಗೂ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟು ಜಾತ್ಯಾತೀತೆಗೆ ಅಡಿಪಾಯ ಹಾಕಿದ್ದಾರೆ, ಕಾಯಕವೇ ಕೈಲಾಸವೆಂದು ಹೇಳುವ ಮೂಲಕ ಕಾಯಕಕ್ಕೆ ಮಹತ್ವ ನೀಡಿದ್ದನ್ನು ಸ್ಮರಿಸಿದ ಅವರು, ಮಹಾತ್ಮರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆಯಬೇಕಾಗಿದೆ. ಪ್ರಪಂಚದಲ್ಲಿಯೇ ಭಾರತ ದೇಶ ವಿವಿಧತೆಯಲ್ಲಿ ಏಕತೆಯನ್ನು ಬಿಂಬಿಸಿದೆ. ಎಲ್ಲ ಜಾತಿ ಜನಾಂಗದವರು ಹಬ್ಬ ಹರಿದಿನಗಳನ್ನು ಆಚರಿಸುವ ಮೂಲಕ ಪರಸ್ಪರ ಸಹೋದರತ್ವ ಮನೋಭಾವನೆಗೆ ಸಾಕ್ಷಿಯಾಗಿದ್ದಾರೆ. ಇದರಿಂದಾಗಿಯೇ ವಿಶ್ವ ಮಟ್ಟದಲ್ಲಿ ಭಾರತದ ಸಂಸ್ಕೃತಿ ಇತಿಹಾಸ ಅಚ್ಚಳಿಯದೇ ಉಳಿದಿದೆ ಎಂದು ದೇಶದ ಸಂಸ್ಕೃತಿಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೆಲಕು ಹಾಕಿದರು.
ದಿವ್ಯ ಸಾನಿಧ್ಯವನ್ನು ಹುಣಶ್ಯಾಳ ಪಿ.ಜಿ.ಯ ನಿಜಗುಣ ದೇವರು ವಹಿಸಿದ್ದರು. ಸಾನಿಧ್ಯವನ್ನು ಹೂಲಿಕಟ್ಟಿಯ ಕುಮಾರ ದೇವರು ವಹಿಸಿದ್ದರು. ಅರಭಾಂವಿಯ ವೇದಮೂತರ್ಿ ಶಿವಯ್ಯ ಹಿರೇಮಠ, ಚಂದ್ರಶೇಖರ ಮಠದ ಮಹಾದೇವ ದೇವರು ನೇತ್ರತ್ವ ವಹಿಸಿದ್ದರು.
ಬಸವರಾಜ ಮಾಳೆದವರ, ಕಾಶಪ್ಪ ಕೋಳಿ, ಮುತ್ತೆಪ್ಪ ಝಲ್ಲಿ, ಬಿ.ಟಿ.ಸಂಪಗಾಂವಿ, ಲಕ್ಷ್ಮಣ ನಿಂಗನ್ನವರ, ಕೆಂಚಪ್ಪ ಮಂಟೂರ, ಭೀಮಶಿ ಮಾಳ್ಯಾಗೋಳ, ಹಣಮಂತ ಚಿಪ್ಪಲಕಟ್ಟಿ, ಹಿರಿಯ ಪತ್ರಕರ್ತ ಚಂದ್ರಕಾಂತ ಉಪ್ಪಾರಟ್ಟಿ, ಮಹೇಶ ಚಿಕ್ಕೋಡಿ, ಬಸು ಆಲೋಶಿ, ಕುಮಾರ ಮಾಳೆದವರ, ರಮೇಶ ಬಿಲಕುಂದಿ, ವಿಠ್ಠಲ ದೇವುಗೋಳ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ಉಪಸ್ಥಿತರಿದ್ದರು.
ಮನುಕುಲದ ವಿಶ್ವಚೇತನಗಳಾದ ಬಸವೇಶ್ವರ, ಭಗೀರಥ, ಕನಕದಾಸ, ಶಿವಾಜಿ ಮಹಾರಾಜ, ಅಂಬಿಗರ ಚೌಡಯ್ಯ, ಸಿದ್ದರಾಮೇಶ್ವರ, ವಾಲ್ಮೀಕಿ, ಅಂಬೇಡ್ಕರ ಅವರುಗಳ ಜಯಂತಿ ಕಾರ್ಯಕ್ರಮದ ನಿಮಿತ್ಯ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಕಾಯಕ್ರಮಕ್ಕೂ ಮುನ್ನ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಮಾತೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 