ಬೈಲಹೊಂಗಲ: ಸರ್ಕಾರಿ ಶಾಲಾ ವಿದ್ಯಾರ್ಥಿ ಗಳಿಗೆ ಸಮವಸ್ತ್ರ ವಿತರಣೆ
ಬೈಲಹೊಂಗಲ 27: ತಾಲೂಕಿನ ಕ್ಲಸ್ಟರ್ ವ್ಯಾಪ್ತಿಯ ಸರ್ಕಾ ರಿ ಪ್ರಾಥಮಿಕ ಹಾಗೂ ಪ್ರಾಢಶಾಲೆಗಳ ವಿದ್ಯಾರ್ಥಿ ಗಳಿಗೆ ಸರ್ಕಾರದ ಪ್ರೋತ್ಸಾಹಕ ಉಚಿತ ಸಮವಸ್ತ್ರ ವಿತರಿಸುವ ಕಾರ್ಯಕ್ಕೆ ಸೋಮವಾರ ಪಟ್ಟಣದ ವಿದ್ಯಾನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಚಾಲನೆ ನೀಡಲಾಯಿತು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಜಿ.ಕೆ.ಸುಲ್ತಾನಬಾಯಿ ಮಾತನಾಡಿ, ಶಾಲಾ ಪ್ರಾರಂಭ ಪೂರ್ವದಲ್ಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಜವಾಬ್ದಾರಿಯಿಂದಲೇ ಉಚಿತ ಸಮವಸ್ತ್ರ ವಿತರಿಸಲಾಗುತ್ತಿದ್ದು ಯಾವದೇ ವಿದ್ಯಾಥರ್ಿ ವಂಚಿತರಾಗಬಾರದೆಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ನೇರವಾಗಿ ಆಯಾ ಶಾಲೆಗಳಿಗೆ ತಲುಪಿಸಲಾಗುತ್ತಿದೆ ಎಂದರು.
ಮುಖ್ಯೋಪಾಧ್ಯಾಯ ಅರುಣ ಹೋಮಕರ ಅವರಿಗೆ ವಿದ್ಯಾಥರ್ಿಗಳಿಗೆ ವಿತರಿಸುವ ಬಟ್ಟೆಗಳನ್ನು ಹಸ್ತಾಂತರಿಸಲಾಯಿತು.
ಸಿಆರ್ಪಿ ಪಿ.ಪಿ.ಸೊಂಟಕ್ಕಿ, ಎಂ.ಜಿ.ಬಾಗೇವಾಡಿ, ನಂ 1 ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಬಿ.ಡಿ.ತಮ್ಮಣ್ಣವರ, ವಿ.ಬಿ.ಹಿರೂರ, ಜಡ್.ಎ.ಪಠಾಣ, ಎಂ.ಕೆ.ಹಾರುಗೊಪ್ಪ, ಎ.ವಾಯ್.ಮಲ್ಲಾಡಿ, ಹಾಗೂ ವಿವಿಧ ಶಾಲೆಗಳ ಶಿಕ್ಷಕ/ಶಿಕ್ಷಕಿಯರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 