ಚಿತ್ರರಂಗಕ್ಕೆ ಅನುದಾನ ನೀಡುವಂತೆ ಸಿಎಂಗೆ ಮನವಿ: ಜೈರಾಜ್
ಬೆಂಗಳೂರು, ಮೇ 29, ಸಿನಿಮಾ ಚಿತ್ರೀಕರಣ ಪ್ರಾರಂಭಕ್ಕೆ ಅವಕಾಶ, ಥಿಯೇಟರ್ ಆರಂಭಿಸುವಂತೆ ಸೇರಿ ಚಿತ್ರರಂಗಕ್ಕೆ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್ ತಿಳಿಸಿದ್ದಾರೆ.ಗೃಹ ಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಗಳಿಗೆ ಬೇಟಿಯಾದ ಬಳಿಕ ಪ್ರತಿಕ್ರಿಯಿಸಿದ ಅವರು,ಕೇಂದ್ರ ಸರ್ಕಾರದ ಜೊತೆಗೆ ಚರ್ಚಿಸಿ ಥಿಯೇಟರ್ಗೆ ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದರು.ಜೂನ್ ಒಂದರಿಂದ ಎಲ್ಲಾ ರೀತಿಯ ಚಟುವಟಿಕೆಗಳು ಆರಂಭವಾಗಲಿವೆ. ಹೀಗಾಗಿ ನಮಗೂ ಅವಕಾಶ ಮಾಡಿಕೊಡುವಂತೆ ಮನವಿ ಸಲ್ಲಿಸಲಾಗಿದೆ ಎಂದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಮಾರ್ಗದರ್ಶನದಂತೆ ಕೆಲಸಕಾರ್ಯ ಆರಂಭಿಸುತ್ತೇವೆ ಎಂದು ತಿಳಿಸಿದರು.ಅಲ್ಲದೇ, ಚಿತ್ರರಂಗಕ್ಕೂ ನೆರವು ನೀಡುವಂತೆ ಸಿಎಂ ಅವರಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 