ಗುಡ್ಡ ಕುಸಿದು ಮಂಗಳೂರು ಹಾಸನ ರೈಲು ಸಂಚಾರ ಸ್ಥಗಿತ
ಮಂಗಳೂರು 03: ಭಾರೀ ಮಳೆಯಿಂದಾಗಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮಂಗಳೂರು-ಹಾಸನ ರೈಲು ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಕಾಡಿನ ಮಧ್ಯೆ ಪರದಾಡುವಂತಾಗಿದೆ.
ಹಾನಸ ಜಿಲ್ಲೆ ಸಕಲೇಶಪುರದ ಶಿರಬಾಗಲು ಬಳಿ ಗುಡ್ಡ ಕುಸಿದು ಬಿದ್ದಿದ್ದರಿಂದ ರೈಲು ಸಂಚಾರ ಸ್ಥಗಿತಗೊಂಡಿದೆ. ಮಂಗಳವಾರ ಬೆಳಗ್ಗೆ 11ಗಂಟೆಗೆ ಮಂಗಳೂರಿನಿಂದ ಹಾಸನಕ್ಕೆ ರೈಲು ಹೊರಟಿತ್ತು.
ಏತನ್ಮಧ್ಯೆ ಗುಡ್ಡ ತೆರವು ಕಾಯರ್ಾಚರಣೆಗೆ ಸಕಲೇಶಪುರದಿಂದ ತಂಡ ಹೊರಟು, ತೆರವು ಕಾಯರ್ಾಚರಣೆಯಲ್ಲಿ ತೊಡಗಿದೆ. ಆದರೆ ಕಾಡಿನ ಮಧ್ಯೆ ರೈಲು ನಿಲುಗಡೆಯಾಗಿದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ವರದಿ ತಿಳಿಸಿದೆ. ಕಳೆದ ಜೂನ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮೂರು ಬಾರಿ ಗುಡ್ಡ ಕುಸಿದು ಬಿದ್ದಿದ್ದರಿಂದ ರೈಲು ಸಂಚಾರ
ಸ್ಥಗಿತಗೊಂಡಿತ್ತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 