ಹೂವಿನಹಡಗಲಿ: ಮುಕ್ತಿ ರಥ ವಾಹನ ಲೋಕಾರ್ಪಣೆ
ಲೋಕದರ್ಶನ ವರದಿ
ಹೂವಿನಹಡಗಲಿ 25: ಇಲ್ಲಿನ ಪುರಸಭೆಯ 14ನೇ ಹಣಕಾಸಿನ ಯೋಜನೆ ಅಡಿಯಲ್ಲಿ 10.85 ಲಕ್ಷ ವೆಚ್ಚದಲ್ಲಿ ಉಚಿತ ಮುಕ್ತಿ ರಥವಾಹನವನ್ನು ಸಚಿವ ಪಿ.ಟಿ.ಪರಮೇಶ್ವರನಾಯ್ಕ ಪಟ್ಟಣದ ನಾಗರಿಕರಿಗೆ ಲೋಕಾರ್ಪಣೆಯನ್ನು ಮಾಡಿದರು.
ಪಟ್ಟಣದಲ್ಲಿ ಜನ ಸಂಖ್ಯೆ ಹೆಚ್ಚುತ್ತಿದ್ದಂತೆ ಸ್ಮಶಾನಕ್ಕೆ ಶವವನ್ನು ತೆಗೆದುಕೊಂಡು ಹೋಗಲು ನೂತನ ಮುಕ್ತಿ ರಥವಾಹನವನ್ನು ಸಚಿವರು ಚಾಲನೆ ನೀಡಿ ಮಾತನಾಡಿದ ಅವರು ಈಗಾಗಲೇ ಸ್ಮಶಾನ ಮೂಲ ಭೂತ ಸೌಲಭ್ಯವನ್ನು ಕಲ್ಪಿಸಲು 1ಕೋಟಿ ಅಭಿವೃದ್ದಿ ಅನುದಾನ ಬಿಡುಗಡೆಯಾಗಿದೆ.ಸಾರ್ವಜನಿಕರು ಹಗಲು-ರಾತ್ರಿ ಅಂತ್ಯಕ್ರಿಯೆ ಮಾಡಲು ಬೆಳಕಿನ ವ್ಯವಸ್ಥೆ,ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ನೀಡಲಾಗಿದೆ ಎಂದರು. ತಹಶೀಲ್ದಾರ ಕೆ.ರಾಘವೇಂದ್ರರಾವ್, ಮುಖಂಡರಾದ ಬಸವನಗೌಡ ಪಾಟೀಲ, ಸೊಪ್ಪಿನ ಮಂಜುನಾಥ, ಕೆ.ಎಸ್.ಶಾಂತನಗೌಡ, ಪುರಸಭೆ ಮುಖ್ಯಾಧಿಕಾರಿ ಡಿ.ಬಿ.ವೀರಣ್ಣ, ಆರೋಗ್ಯ ನಿರೀಕ್ಷಕ ಶ್ರೀನಿವಾಸ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 