ಬಿರುಗಾಳಿ ಸಹಿತ ಗುಡುಗಿನ ಮಳೆಗೆ ಅಪಾರ ಹಾನಿ
ಲೋಕದರ್ಶನವರದಿ
ಶಿಗ್ಗಾವಿ14 : ಕಳೆದ ಶುಕ್ರವಾರ ಸುರಿದ ಬಿರುಗಾಳಿ ಸಹಿತ ಗುಡುಗಿನ ಮಳೆಗೆ ಪಟ್ಟಣದ ವೀರಭದ್ರೇಶ್ವರ ಓಣಿ ಆಶ್ರಯ ಪ್ಲಾಟ್ ಸೇರಿದಂತೆ ವಿವಿಧ ನಗರಗಳಲ್ಲಿ ಅಪಾರ ಹಾನಿ ಸಂಭವಿಸಿದೆ.
ಪಟ್ಟಣದ ವೀರಭದ್ರೇಶ್ವರ ಓಣಿಯಲ್ಲಿ ವಿದ್ಯುತ್ ಕಂಬ ಉರುಳಿ ಬಸವಣ್ಣೆಪ್ಪ ಬೈಲವಾಳ ಅವರ ಬೈಕ್ ನಜ್ಜುಗುಜ್ಜಾಗಿದ್ದು ಅದೇ ಓಣಿಯ ಫಕ್ಕೀರಪ್ಪ ಗಂಜೀಗಟ್ಟಿ ಎಂಬುವವರ ಮನೆಯ ಮೇಲ್ಚಾವಣಿಯ ಶಡ್ಡ್ ಬಿದ್ದು ಮನೆ ಹಾನಿಯಾಗಿದೆ.
ಇನ್ನು ಆಶ್ರಯ ಪ್ಲಾಟ್ನಲ್ಲಿ ವಿದ್ಯುತ್ ಕಂಬ ಬಿದ್ದು ನಡೆದಾಡಲು ಕೆಲಕಾಲ ಅಡಚಣೆಯಾದರೂ ಕೆಇಬಿ ಸಿಬ್ಬಂದಿಯ ಮುಂಜಾಗ್ರತಾ ಕ್ರಮದಿಂದ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಪ್ರತ್ಯಕ್ಷದಶರ್ಿಗಳು ತಿಳಿಸಿದ್ದಾರೆ.
ಒಟ್ಟಾರೆ ಪಟ್ಟಣದಲ್ಲಿ ಬಂದ ಬಿರುಗಾಳಿ ಸಮೇತ ಮಳೆಗೆ ಪಟ್ಟಣದ ವ್ಯಾಪಾರಸ್ಥರ ಅಂಗಡಿಗಳ ಬೋರ್ಡಗಳು ಸೇರಿದಂತೆ ವರ್ಷದ ಮೊದಲ ಬಿರುಸಿನ ಮಳೆಯಾಗಿರುವುದರಿಂದ ಚರಂಡಿಗಳು ತುಂಬಿ ನೀರು ರಸ್ತೆಗೂ ಮತ್ತು ಮನೆಗಳಿಗೆ ನುಗ್ಗಿ ಹಾನಿ ಮಾಡಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 