ಬಿರುಗಾಳಿ ಸಹಿತ ಗುಡುಗಿನ ಮಳೆಗೆ ಅಪಾರ ಹಾನಿ
ಲೋಕದರ್ಶನವರದಿ
ಶಿಗ್ಗಾವಿ14 : ಕಳೆದ ಶುಕ್ರವಾರ ಸುರಿದ ಬಿರುಗಾಳಿ ಸಹಿತ ಗುಡುಗಿನ ಮಳೆಗೆ ಪಟ್ಟಣದ ವೀರಭದ್ರೇಶ್ವರ ಓಣಿ ಆಶ್ರಯ ಪ್ಲಾಟ್ ಸೇರಿದಂತೆ ವಿವಿಧ ನಗರಗಳಲ್ಲಿ ಅಪಾರ ಹಾನಿ ಸಂಭವಿಸಿದೆ.
ಪಟ್ಟಣದ ವೀರಭದ್ರೇಶ್ವರ ಓಣಿಯಲ್ಲಿ ವಿದ್ಯುತ್ ಕಂಬ ಉರುಳಿ ಬಸವಣ್ಣೆಪ್ಪ ಬೈಲವಾಳ ಅವರ ಬೈಕ್ ನಜ್ಜುಗುಜ್ಜಾಗಿದ್ದು ಅದೇ ಓಣಿಯ ಫಕ್ಕೀರಪ್ಪ ಗಂಜೀಗಟ್ಟಿ ಎಂಬುವವರ ಮನೆಯ ಮೇಲ್ಚಾವಣಿಯ ಶಡ್ಡ್ ಬಿದ್ದು ಮನೆ ಹಾನಿಯಾಗಿದೆ.
ಇನ್ನು ಆಶ್ರಯ ಪ್ಲಾಟ್ನಲ್ಲಿ ವಿದ್ಯುತ್ ಕಂಬ ಬಿದ್ದು ನಡೆದಾಡಲು ಕೆಲಕಾಲ ಅಡಚಣೆಯಾದರೂ ಕೆಇಬಿ ಸಿಬ್ಬಂದಿಯ ಮುಂಜಾಗ್ರತಾ ಕ್ರಮದಿಂದ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಪ್ರತ್ಯಕ್ಷದಶರ್ಿಗಳು ತಿಳಿಸಿದ್ದಾರೆ.
ಒಟ್ಟಾರೆ ಪಟ್ಟಣದಲ್ಲಿ ಬಂದ ಬಿರುಗಾಳಿ ಸಮೇತ ಮಳೆಗೆ ಪಟ್ಟಣದ ವ್ಯಾಪಾರಸ್ಥರ ಅಂಗಡಿಗಳ ಬೋರ್ಡಗಳು ಸೇರಿದಂತೆ ವರ್ಷದ ಮೊದಲ ಬಿರುಸಿನ ಮಳೆಯಾಗಿರುವುದರಿಂದ ಚರಂಡಿಗಳು ತುಂಬಿ ನೀರು ರಸ್ತೆಗೂ ಮತ್ತು ಮನೆಗಳಿಗೆ ನುಗ್ಗಿ ಹಾನಿ ಮಾಡಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 