ಲಾಕ್ ಡೌನ್ ಜನರನ್ನು ಅಸ್ಥಿರಗೊಳಿಸಿದೆ ಎಂದ ಸಾಕ್ಷಿ
ನವದೆಹಲಿ, ಮೇ 28,ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ವದಂತಿ ವಿಚಾರ ಮತ್ತೊಮ್ಮೆ ಸಾಮಾಜಿಕ ತಾಣದಲ್ಲಿ ಸದ್ದು ಮಾಡುತ್ತಿದೆ. ಅದರಲ್ಲೂ ಧೋನಿ ರಿಟೈರ್ಸ್ ಹ್ಯಾಷ್ ಟ್ಯಾಗ್ ಬಳಸಿ ವದಂತಿ ಹಬ್ಬಿಸಲಾಗುತ್ತಿದೆ.ಆದರೆ, ಹ್ಯಾಷ್ ಟ್ಯಾಗ್ ಗೆ ಪ್ರಭಾವಿತಳಾಗದ ಧೋನಿ ಪತ್ನಿ ಸಾಕ್ಷಿ, ಧೋನಿ ಭವಿಷ್ಯದ ಕುರಿತು ವದಂತಿ ಸೃಷ್ಟಿಸುತ್ತಿರುವ ನೆಟ್ಟಿಗರನ್ನು ಜಾಡಿಸಿದ್ದಾರೆ.ಈ ಮಧ್ಯೆ ಇಂಥ ಯಾವುದೇ ವದಂತಿಗಳಿಗೆ ಧೋನಿ ಇದುವರೆಗೂ ಪ್ರತಿಕ್ರಿಯಿಸಿಲ್ಲ. '' ಇದು ಕೇವಲ ಉಹಾಪೋಹಾಗಳಷ್ಟೇ, ಅರಿವಿದೆ.. ಲಾಕ್ ಡೌನ್ ಜನರ ತಲೆಯನ್ನು ಅಸ್ಥಿರಗೊಳಿಸಿದೆ... '' ಎಂದು ಸಾಕ್ಷಿ ಟ್ವೀಟ್ ಮಾಡಿದ್ದರು. ಆದರೆ ಟ್ವೀಟ್ ಮಾಡಿದ ಕೆಲವೇ ಕ್ಷಣದಲ್ಲಿ ಇದನ್ನು ತೆಗೆದು ಹಾಕಿದ್ದಾರೆ. ಆದರೆ ಅವರ ಟ್ವೀಟ್ ಸ್ಕ್ರೀನ್ ಶಾಟ್ ಭಾರಿ ವೈರಲ್ ಆಗಿದೆ.2019ರ ವಿಶ್ವ ಕಪ್ ನಲ್ಲಿ ಪಾಲ್ಗೊಂಡ ನಂತರ ಸ್ಪರ್ಧಾತ್ಮಕ ಕ್ರಿಕೆಟ್ ನಿಂದ ದೂರವೇ ಉಳಿದಿರುವ 38 ವರ್ಷದ ಧೋನಿ, ಕುಟುಂಬದೊಂದಿಗೆ ಸಮಯ ಆನಂದಿಸುತ್ತಿದ್ದಾರೆ.ಭಾರತದ ಮಹತ್ವದ ಪಂದ್ಯಗಳಲ್ಲಿ ನಿಧಾನಗತಿಯ ಬ್ಯಾಟಿಂಗ್ ಗಾಗಿ ಧೋನಿ ಹಲವು ಬಾರಿ ಟೀಕೆಗೆ ಗುರಿಯಾಗಿದ್ದಾರೆ. ಈ ಮಧ್ಯೆ 2019-20ರ ಬಿಸಿಸಿಐ ಕೇಂದ್ರ ಗುತ್ತಿಗೆ ಆಟಗಾರರ ಪಟ್ಟಿಯಿಂದಲೂ ಧೋನಿ ಹೆಸರನ್ನು ಕೈಬಿಡಲಾಗಿದೆ. ಹೀಗಾಗಿ ಧೋನಿ ನಿವೃತ್ತಿ ಕುರಿತು ಪುಂಖಾನುಪುಂಖ ವದಂತಿಗಳು ಹರಡುತ್ತಲೇ ಇವೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 