ಸೊಲ್ಲಾಪೂರ ಸಿದ್ದರಾಮೇಶ್ವರ ಜೀವನ ದರ್ಶನ ಆಧ್ಯಾತ್ಮಿಕ ಪ್ರವಚನ
ಉಗರಗೋಳ(ತಾ.ಸವದತ್ತಿ) 04: ತಾಯಿ ತಂದೆ ಕಲಿಸುವ ಸಂಸ್ಕಾರ, ಗುರುಗಳು ಕಲಿಸುವ ವಿದ್ಯೆ, ಸಮಾಜ ಕಲಿಸುವ ಬದುಕುವ ಕಲೆ, ನಾವು ಯಾವ ರೀತಿಯಾಗಿ ಸ್ವೀಕರಿಸುತ್ತೇವೆ ಎಂಬುವದರ ಮೇಲೆ ನಮ್ಮ ವ್ಯಕ್ತಿತ್ವ ರೂಪಗೊಳ್ಳುತ್ತದೆ ಎಂದು ಬಾಗಲಕೋಟೆಯ ಪರಮರಾಮಾರೂಢ ಮಹಾಸ್ವಾಮಿಗಳು ಹೇಳಿದರು.
ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ 5 ದಿನಗಳ ಪರ್ಯಂತ ಸೊಲ್ಲಾಪೂರದ ಸಿದ್ದರಾಮೇಶ್ವರ ಜೀವನ ದರ್ಶನ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದ ಅವರು ಶರಣರ ಸಂಬಂಧಗಳು ನಾಲಿಗೆಗಿಂತ ಭಕ್ತರ ಹೃದಯವನ್ನು ಇಷ್ಟಪಡುತ್ತವೆ. ಉದ್ದೂದ್ದ ಮಾತುಗಳ ಬದಲಾಗಿ ಹೃದಯಕ್ಕೆ ಹತ್ತಿರವಾಗಬಲ್ಲ ಮೃದು ನಡುವಳಿಕೆ ನಮ್ಮದಾಗಲಿ ಎಂದರು.
ದೊಡವಾಡದ ಜಡಿಸಿದ್ದೇಶ್ವರ ಮಹಾಸ್ವಾಮಿಗಳಿಂದ ಸಿದ್ದರಾಮೇಶ್ವರ ಜೀವನ ದರ್ಶನ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮ ಜರುಗಿತು.
ನಿವರ್ಾಣೇಶ್ವರಮಠದ ಗುರುಮಹಾಂತ ಪೂಜ್ಯರು ಹಾಗೂ ರಾಮಾರೂಢಮಠದ ಬ್ರಹ್ಮಾರೂಢ ಶ್ರೀಗಳು ಸಾನಿಧ್ಯವಹಿಸಿದ್ದರು. ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸಿದ್ದರಾಮೇಶ್ವರ ಜೀವನ ದರ್ಶನ ಆಧ್ಯಾತ್ಮಿಕ ಪ್ರವಚನ ಆಲಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 