ವಿಜಯಪುರ: ಕಾಲುವೆಗಳಿಗೆ ನೀರು ಹರಿಸಲು ರೈತರ ಮನವಿ
ಲೋಕದರ್ಶನ ವರದಿ
ವಿಜಯಪುರ 09: ಮುಳವಾಡ ಏತನೀರಾವರಿ ಯೋಜನೆ ಹಣಮಾಪುರ ಜಾಕವೆಲ್ನಿಂದ ಪೂರ್ವ ಹಾಗೂ ಪಶ್ಚಿಮ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ಜಿಲ್ಲಾಧಿಕಾರಿಗಳಿಗೆ ಇಂದು ಮನವಿ ಅರ್ಪಿಸಿದರು
ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶದಂತೆ ಈ ಹಿಂದೆ ನೀರು ಹರಿಸಲಾಗಿದ್ದರೂ, 80ಕಿ.ಮೀ ಉದ್ದದ ಪಶ್ಚಿಮ ಕಾಲುವೆಯಲ್ಲಿ ಕೇವಲ 40ಕಿ.ಮೀವರೆಗೆ ಮಾತ್ರ ನೀರು ಹರಿದಿದೆ. ಮುಂದಿನ 40ಕಿ.ಮೀ ವ್ಯಾಪ್ತಿಯಲ್ಲಿ ಸುಮಾರು 20ಗ್ರಾಮಗಳು ಇದ್ದು, ಇಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆಯಿದೆ. ಜಲಾಶಯದಲ್ಲಿ ಸಾಕಷ್ಟು ನೀರಿನ ಲಭ್ಯತೆಯಿರುವ ಈ ಸಂದರ್ಭದಲ್ಲಿ ಪಶ್ಚಿಮ ಕಾಲುವೆಯ ಕೊನೆಯ ಹಳ್ಳಿಯವರೆಗೂ ನೀರು ಹರಿಸಿ, ಕುಡಿಯುವ ನೀರಿನ ಸಮಸ್ಯೆ ನೀಗಿಸಬೇಕು ಎಂದು ರೈತ ಮುಖಂಡ ಡಾ.ಕೆ.ಎಚ್.ಮುಂಬಾರೆಡ್ಡಿ ಜಿಲ್ಲಾಧಿಕಾರಿಗಳಿಗೆ ವಿನಂತಿಸಿದರು.
ಕಂಬಾಗಿ, ಬೋಳಚಿಕ್ಕಲಕಿ, ನಂದ್ಯಾಳ, ಕಾತ್ರಾಳ, ಗುಣದಾಳ, ಸಂಗಾಪುರ, ಹಣಮಸಾಗರ ಗ್ರಾಮಗಳ ಪರವಾಗಿ ಉಮೇಶ ಮಲ್ಲಣ್ಣವರ, ರಮೇಶ ಬಡ್ರಿ, ಮಲ್ಲು ದಳವಾಯಿ, ಮಹಾದೇವಪ್ಪ ಮದರಖಂಡಿ, ಗಿರಿಮಲ್ಲಪ್ಪ ಮಠಪತಿ, ರಾಮನಿಂಗ ಕೊಕಟನೂರ ಸೇರಿದಂತೆ ಹಲವು ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಅಪರ್ಿಸಿದರು.
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಕನಗವಲ್ಲಿ ಅವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ತಮ್ಮ ಮನವಿಯನ್ನು ರವಾನಿಸಿ, ಅಗತ್ಯ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ 