ಶ್ರೀವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ “76ನೆಯ ಗಣರಾಜ್ಯೋತ್ಸವ”

“76th Republic Day” at Srividyaniketan Public School

ಶ್ರೀವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ “76ನೆಯ ಗಣರಾಜ್ಯೋತ್ಸವ” 

ಗಂಗಾವತಿ 26: ತಾಲ್ಲೂಕಿನ ಶ್ರೀರಾಮನಗರದ ಶ್ರೀವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ “76ನೆಯ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ  ನೆಕ್ಕಂಟಿ ಸೂರಿಬಾಬು ಅವರು ವಿದ್ಯಾರ್ಥಿಗಳು ಗಣರಾಜ್ಯೋತ್ಸವದ ಹಿನ್ನೆಲೆಯನ್ನು ಅರಿತು, ಸಂವಿಧಾನದ ಮಹತ್ವವನ್ನು ತಿಳಿದು, ದೇಶದ  ನೀತಿ ನಿಯಮಗಳನ್ನು ಪಾಲಿಸುವ ಮೂಲಕ ಉಜ್ವಲ ರಾಷ್ಟ್ರ ನಿರ್ಮಾಣಕ್ಕೆ ಕಂಕಣಬದ್ಧರಾಗಬೇಕು, ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮ ಜವಾಬ್ದಾರಿಯನ್ನು ಅರಿತು ಶಾಲಾ ಮಟ್ಟದಿಂದಲೇ ತಾವೆಲ್ಲರೂ ಶಾಲಾ ನಿಯಮಗಳನ್ನು ಪಾಲಿಸುವ ಮೂಲಕ ಶಿಸ್ತನ್ನು ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಿಸಲು ಶ್ರಮಿಸಬೇಕೆಂದು ಕರೆ ನೀಡಿದರು. ದೇಶದ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಸೈನಿಕರನ್ನು ಹಾಗೂ ಸಾರ್ವಜನಿಕರ ಹಿತಾಸಕ್ತಿಗಾಗಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನು ಮತ್ತು ಪ್ರಾಮಾಣಿಕ, ನ್ಯಾಯಯುತ ಸೇವೆ ಗೈಯುತ್ತಿರುವ ಜನಪ್ರತಿನಿಧಿಗಳನ್ನು ಸ್ಮರಿಸಿ, ದೇಶದ ಪ್ರಗತಿಗಾಗಿ ಶ್ರಮಿಸುತ್ತಿರುವ ಎಲ್ಲರಿಗೂ ಗೌರವವನ್ನು ನೀಡಬೇಕೆಂದು ತಿಳಿಸಿದರು.  ಶಾಲೆಯ ಪ್ರಾಂಶುಪಾಲರಾದ ಸುಭದ್ರಾ ದೇವಿ ಅವರು ಮಾತನಾಡಿ ನಾವೆಲ್ಲರು ಸಂವಿಧಾನವನ್ನು ಗೌರವಿಸಿ ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸಬೇಕೆಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರಾದ ಕೆ. ಜೆ. ಜೋಸ್ ಮತ್ತು ವಿದ್ಯಾರ್ಥಿಗಳು ಗಣರಾಜ್ಯೋತ್ಸವದ ಹಿನ್ನೆಲೆಯ ಕುರಿತು ಮಾತನಾಡಿದರು.  ಈ ಕಾರ್ಯಕ್ರಮದಲ್ಲಿ ಶಾಲೆಯ ಶೈಕ್ಷಣಿಕ ಮುಖ್ಯಸ್ಥರಾದ ಎಸ್‌. ಕೃಷ್ಣವೇಣಿ, ಶಾಲೆಯ ಕ್ಯಾಂಪಸ್ ಮ್ಯಾನೇಜರ್ ಜಿ. ನಾಗೇಶ್ವರ್‌ರಾವ್, ಶಾಲೆಯ ಪಿ.ಆರ್‌.ಎಮ್ ನಿಂಗಪ್ಪ, ಶಾಲೆಯ ಆರ್‌.ಎಮ್‌.  ಮಂಜುನಾಥ, ವಸತಿ ನಿಲಯದ ಮುಖ್ಯಸ್ಥರಾದ  ಕಾಳೇಶ್, ಶಾಲೆಯ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.