ಕೊರೋನಾ ಲಾಕ್ ಡೌನ್ : ಬಡವರಿಗಾಗಿ 1.7 ಲಕ್ಷ ಕೋಟಿ ರೂ. ಪ್ಯಾಕೇಜ್ ಪ್ರಕಟಣೆ
ನವದೆಹಲಿ, ಮಾ 26, ಕೊರೋನಾ ವೈರಸ್ ಸೋಂಕು ನಿಯಂತ್ರಿಸುವ ಸಲುವಾಗಿ ಇಡೀ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ನಿರ್ಬಂಧ ಘೋಷಿಸಿದ 36 ಗಂಟೆಗಳ ಬಳಿಕ, ಕೇಂದ್ರ ಸರ್ಕಾರ ರೈತರು, ವಲಸೆ ಕಾರ್ಮಿಕರು ಹಾಗೂ ಗ್ರಾಮೀಣ ಮತ್ತು ನಗರ ಪ್ರದೇಶಗಳ ಬಡವರಿಗಾಗಿ 1.7 ಲಕ್ಷ ಕೋಟಿ ರೂ. ಪ್ಯಾಕೇಜ್ ಪ್ರಕಟಿಸಿದೆ. ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪ್ರಧಾನ ಮಂತ್ರಿ ಬಡವರ ಕಲ್ಯಾಣ ಯೋಜನೆಯಡಿ ವಲಸೆ ಕಾರ್ಮಿಕರು ಹಾಗೂ ಬಡವರಿಗೆ ಸಹಾಯ ನೀಡಲಾಗುವುದು ಎಂದು ಹೇಳಿದ್ದಾರೆ. ವೈರಸ್ಗೆ ತಮ್ಮನ್ನು ಒಡ್ಡಿಕೊಳ್ಳುತ್ತಿರುವ ಕೋವಿಡ್ -19 ಯೋಧರಿಗೆ ಮೂರು ತಿಂಗಳವರೆಗೆ ಪ್ರತಿ ವ್ಯಕ್ತಿಗೆ 50 ಲಕ್ಷ ರೂ.ಗಳ ವಿಮಾ ರಕ್ಷಣೆಯನ್ನು ನೀಡಲಾಗುವುದು ಎಂದು ಸಚಿವೆ ತಿಳಿಸಿದ್ದು, ಇವರಲ್ಲಿ ವೈದ್ಯರು, ಅರೆವೈದ್ಯರು, ಆರೋಗ್ಯ ಕಾರ್ಯಕರ್ತರು, ನೈರ್ಮಲ್ಯ ಕಾರ್ಮಿಕರು, ಆಶಾ ಕಾರ್ಮಿಕರು ಸೇರಿದ್ದಾರೆ. ಈಗಾಗಲೇ ಪ್ರತಿ ತಿಂಗಳು 5 ಕೆಜಿ ಪಡಿತರ ಪಡೆದುಕೊಳ್ಳುತ್ತಿರುವ 80 ಕೋಟಿ ಜನರಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ಅಥವಾ ಗೋಧಿಯನ್ನು ಮುಂದಿನ 3 ತಿಂಗಳವರೆಗೆ ವಿತರಿಸಲಾಗುವುದು. ಅಲ್ಲದೆ ಗೊತ್ತುಪಡಿಸಿದ ಧಾನ್ಯವನ್ನು ಉಚಿತವಾಗಿ ನೀಡಲಾಗುವುದು ಎಂದು ಹೇಳಿದ್ದಾರೆ. ರೈತರು, ಮಹಾತ್ಮ ಗಾಂಧಿ ನರೇಗಾ ಕಾರ್ಮಿಕರು, ದಿವ್ಯಾಂಗರು, ಜನಧನ ಯೋಜನೆಯಡಿ ಬರುವ ಮಹಿಳೆಯರು, ಉಜ್ವಲ ಯೋಜನೆಯಡಿಯ ಬಡವರು, ಸ್ವಸಹಾಯ ಗುಂಪುಗಳಿಗಾಗಿ ಹಣಕಾಸು ಸಚಿವೆ 8 ವಿಶೇಷ ಪ್ರಕಟಣೆಗಳನ್ನು ಹಣಕಾಸು ಸಚಿವರು ಹೊರಡಿಸಿದ್ದಾರೆ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 