ಕೋವಿಡ್ ಪರಿಹಾರ ನಿಧಿಗೆ ಕೆಸಿಸಿ ಬ್ಯಾಂಕಿನಿಂದ 10 ಲಕ್ಷ ರೂ.
ಧಾರವಾಡ, ಏ.29,ಕೆಸಿಸಿ ಬ್ಯಾಂಕ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಬುಧವಾರ 10 ಲಕ್ಷ ರೂಪಾಯಿಗಳ ಚೆಕ್ನ್ನು ಸಲ್ಲಿಸಲಾಯಿತು.ಬ್ಯಾಂಕಿನ ಅಧ್ಯಕ್ಷ ಬಾಪುಗೌಡ ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರ ಮೂಲಕ ಚೆಕ್ ಸಲ್ಲಿಸಲಾಯಿತು. ಕೊರೊನಾ ವೈರಸ್ ಹರಡುವಿಕೆಯಿಂದ ಜನಜೀವನ ಅಸ್ತವ್ಯವಸ್ತಗೊಂಡಿದೆ. ಈ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರಕಾರ ನಿರಂತರ ಶ್ರಮಿಸುತ್ತಿದೆ. ಸರಕಾರದ ಚಾಣಾಕ್ಷತನದ ಕಾರ್ಯವೈಖರಿಯಿಂದ ಪರಿಸ್ಥಿತಿ ಗಂಭೀರ ಹಂತ ತಲುಪಿಲ್ಲ ಎಂಬುದು ಸಮಾಧಾನದ ಸಂಗತಿ. ’ಸರಕಾರಕ್ಕೆ ಈ ಸಂದರ್ಭದಲ್ಲಿ ಆರ್ಥಿಕ ನೆರವು ನೀಡುವ ಸಲುವಾಗಿ ಬ್ಯಾಂಕ್ ಮತ್ತು ಬ್ಯಾಂಕಿನ ಸಿಬ್ಬಂದಿ ಸಂಗ್ರಹಿಸಿದ 10 ಲಕ್ಷ ರೂಪಾಯಿಗಳ ಚೆಕ್ನ್ನು ಸಲ್ಲಿಸಲಾಯಿತು. ಅವಿಭಜಿತ ಧಾರವಾಡ ಜಿಲ್ಲೆಯ ಕಾರ್ಯವ್ಯಾಪ್ತಿ ಹೊಂದಿರುವ ಬ್ಯಾಂಕಿನ ಅಧೀನದ ಸಹಕಾರ ಸಂಘಗಳ ವತಿಯಿಂದ ಈಗಾಗಲೇ 19,20,800 ರೂಪಾಯಿಗಳನ್ನು ಸಂಗ್ರಹಿಸಿ ಸಹಕಾರ ಇಲಾಖೆಯ ಉಪನಿಬಂಧಕರ ಮೂಲಕ ಪರಿಹಾರ ನಿಧಿಗೆ ಸಲ್ಲಿಸಲಾಗಿದೆ’ ಎಂದು ಬ್ಯಾಂಕಿನ ಅಧ್ಯಕ್ಷ ಬಾಪುಗೌಡ ಪಾಟೀಲ ತಿಳಿಸಿದರು. ಬ್ಯಾಂಕಿನ ನಿರ್ದೇಶಕರಾದ ಮಲ್ಲಿಕಾರ್ಜುನ ಹೊರಕೇರಿ, ನಿಂಗನಗೌಡ ಮರಿಗೌಡರ, ಉಮೇಶ ಭೂಮಣ್ಣವರ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಮುನಿಯಪ್ಪ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 