ದತ್ತಾತ್ರೇಯ ದೇವಸ್ಥಾನದಲ್ಲಿ 107 ನೇ ದತ್ತ ಜಯಂತಿ ಆಚರಣೆ
107th Datta Jayanti Celebrations at Dattatreya Temple
ಹಾನಗಲ್ 13 : ಇಲ್ಲಿನ ದತ್ತಾತ್ರೇಯ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ 107 ನೇ ದತ್ತ ಜಯಂತಿಯಲ್ಲಿ ಶಾಸಕ ಶ್ರೀನಿವಾಸ ಮಾನೆ ಭಾಗವಹಿಸಿ, ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಬ್ರಹ್ಮ, ವಿಷ್ಣು, ಮಹೇಶ್ವರ ಈ ತ್ರಿಮೂರ್ತಿಗಳ ಅವತಾರವಾಗಿ ಮಹಾಯೋಗಿ ದತ್ತನನ್ನು ಪೂಜಿಸಲಾಗುತ್ತಿದೆ. ದತ್ತ ಅಖಂಡ ಗುರುಪಂಪರೆಯ ಮೂಲಸ್ತಂಭ, ಮಾನವಕುಲಕ್ಕೆ ದಾರೀದೀಪವಾಗಲು ತೆಗೆದಕೊಂಡ ಅವತಾರ. ಮಾರ್ಗದರ್ಶನ, ಆತ್ಮಶುದ್ಧಿ, ಸೇವೆಯ ಸಂಕೇತವಾಗಿ ದತ್ತ ಜಯಂತಿ ಆಚರಿಸಲಾಗುತ್ತಿದೆ ಎಂದು ಶಾಸಕ ಮಾನೆ ಈ ಸಂದರ್ಭದಲ್ಲಿ ತಿಳಿಸಿದರು.
ಮುಖ್ಯ ಅರ್ಚಕ ಮುಕುಂದಭಟ್ ಕಾಗಿನೆಲ್ಲಿ, ಮುಖಂಡರಾದ ರವಿ ದೇಶಪಾಂಡೆ, ಘನಶ್ಯಾಮ ದೇಶಪಾಂಡೆ, ವಿದ್ಯಾಶಂಕರ ದೇಶಪಾಂಡೆ, ವಿನಯ ಬಂಕನಾಳ, ವಲ್ಲಭ ಜೋಶಿ, ಕೃಷ್ಣ ಪೂಜಾರ ಸೇರಿದಂತೆ ವಿಪ್ರ ಸಮಾಜದ ಪದಾಧಿಕಾರಿಗಳು, ಜಯಂತಿ ಸಮಿತಿಯ ಪ್ರಮುಖರು, ಸದ್ಭಕ್ತ ಮಂಡಳಿ ಸದಸ್ಯರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 