ರಥಸಪ್ತಮಿಯ ನಿಮಿತ್ಯ 108 ಸೂರ್ಯ ನಮಸ್ಕಾರ
108 Surya Namaskara on the occasion of Rathasaptami
ಮಾಂಜರಿ 04 ಪ್ರತಿದಿನ ಸೂರ್ಯ ನಮಸ್ಕಾರದ ಅಭ್ಯಾಸ ನಮ್ಮ ಅನೇಕ ಮನೋದೈಹಿಕ ಕಾಯಿಲೆಗಳನ್ನು ದೂರಗೊಳಿಸಿ ಶರೀರವನ್ನು ಸದೃಢ ಮಾಡುತ್ತದೆ ಕಾರಣ ಇಂದಿನ ಯುವಕರು ಕಡ್ಡಾಯವಾಗಿ ಸೂರ್ಯ ನಮಸ್ಕಾರವನ್ನು ತಮ್ಮ ದೈನಂದಿನ ಜೀವನ ಶೈಲಿಯ ಕ್ರಮವಾಗಿ ರೂಢಿಸಿಕೊಳ್ಳಬೇಕೆಂದು ಚಿಕ್ಕೋಡಿಯ ಕೆ ಎಲ್ ಇ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ಕಿರಣಕುಮಾರ ಮುತ್ನಾಳಿ ಹೇಳಿದರು.
ಅವರು ಚಿಕೋಡಿಯ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಸ್ವಸ್ಥವೃತ್ತ ಹಾಗೂ ಯೋಗ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ರಥಸಪ್ತಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು 108 ಸೂರ್ಯ ನಮಸ್ಕಾರ ಪ್ರಾತ್ಯಕ್ಷಿಕೆ ಮಾಡಿದರು ಸಂಸ್ಕೃತ ಪ್ರಾಧ್ಯಾಪಕರಾದ ಸುದರ್ಶನ ಭಟ್ ಸೂರ್ಯ ದೇವರಿಗೆ ಅರ್ಘ್ಯ ಪ್ರದಾನ ಮಾಡಿದರು. ಯೋಗ ಶಿಕ್ಷಕರಾದ ಮಲ್ಲಿಕಾರ್ಜುನ ಬಚಡಿ ಸೂರ್ಯ ನಮಸ್ಕಾರ ಪ್ರಾತ್ಯಕ್ಷಿಕೆ ನೀಡಿದರು ಡಾ. ಜೀವನ ಕುಮಾರ್ ಗಡಗೆ ಸ್ವಾಗತ ಕೋರಿದರು, ಡಾ. ಸಂತೋಷ ಶಿವಣ್ಣವರ ವಂದಿಸಿದರು. ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ಸಿಬ್ಬಂದಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 