108 ನೇ ವಾರ್ಷಿಕ ಸಾಮಾನ್ಯ ಸಭೆ
108th Annual General Meeting
108 ನೇ ವಾರ್ಷಿಕ ಸಾಮಾನ್ಯ ಸಭೆ
ವಿಜಯನಗರ 10 : ಜಿಲ್ಲೆಯ ಸಂಡೂರು ತಾಲೂಕಾ ನಂದಿಹಳ್ಳಿಯಲ್ಲಿರುವ ಕೃಷ್ಣದೇವರಾಯ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದಲ್ಲಿ ಇದೇ ತಿಂಗಳ 27ನೇ ದಿನಾಂಕದಂದು ಬೆಳಿಗ್ಗೆ 11.00 ಗಂಟೆಗೆ ಆಯೋಜಿಸಿರುವ ಈ ಸಭೆಯ ಅಧ್ಯಕ್ಷತೆಯನ್ನು ನಾಡೋಜ ಮಹೇಶ್ ಜೋಶಿ ವಹಿಸಿಕೊಳ್ಳಲಿದ್ದಾರೆಂದು ಕೊಪ್ಪಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷರಾದ ರಾಮಚಂದ್ರಗೌಡ ಬಿ ಗೊಂಡಬಾಳ ತಿಳಿಸಿದ್ದಾರೆ. ಅವರು ಕೊಪ್ಪಳ ಸಾಹಿತ್ಯ ಭವನದ ಮುಂದೆ ಈ ಸಭೆಯ ಸೂಚನಾ ಪತ್ರಗಳನ್ನು ಅಂಟಿಸುವ ಮೂಲಕ ಪ್ರಚಾರ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಕಸಾಪ ಘಟಕದ ಕಾರ್ಯದರ್ಶಿ ಶೇಖರಗೌಡ ಪಾಟೀಲ್, ಸಂಘಟನಾ ಕಾರ್ಯದರ್ಶಿ ರಮೇಶ್ ತುಪ್ಪದ, ಕೊಪ್ಪಳ ತಾಲೂಕಾ ಕಸಾಪ ಘಟಕದ ಕಾರ್ಯದರ್ಶಿ ಬಸವರಾಜ ಶಿರಗುಂಪಿ ಶೆಟ್ಟರ್ , ಶಶಿಧರ ಗಾಣಗಿ, ಚಂದ್ರಶೇಖರ ಬಿ. ಕೊಟ್ರೇಶ ಬೆನ್ನಳ್ಳಿ ಇತರರು ಉಪಸ್ಥಿತರಿದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 