110ಜನರನ್ನು ಉಚಿತ ನೇತ್ರ ಶಸ್ತ್ರ ಚಿಕಿತ್ಸೆಗೆ ಆಯ್ಕೆ
110 people selected for free eye surgery
110ಜನರನ್ನು ಉಚಿತ ನೇತ್ರ ಶಸ್ತ್ರ ಚಿಕಿತ್ಸೆಗೆ ಆಯ್ಕೆ
ಹಾವೇರಿ 29: ಇಲ್ಲಿನ ಹುಕ್ಕೇರಿಮಠದ ಆವರಣದಲ್ಲಿ ಉಚಿತ ನೇತ್ರ ಪರೀಕ್ಷೆಗೆ ಸಾರ್ವಜನಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಂದೇ ದಿನಕ್ಕೆ ಸುಮಾರು 230ಕ್ಕೂ ಹೆಚ್ಚು ಜನರು ಈ ನೇತ್ರ ಪರೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ನೇತ್ರಗಳ ಕುರಿತು ಕಾಳಜಿಯನ್ನು ತೋರಿ್ಡಸಿದರು.ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ ಸಿಬ್ಬಂದಿ ಪರೀಕ್ಷಿಸಿ ಈ ಪೈಕಿ ಸುಮಾರು 110ಜನರನ್ನು ಉಚಿತ ನೇತ್ರ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾಗಿದ್ದಾರೆ.
ಉಚಿತ ನೇತ್ರ ಪರೀಕ್ಷೆ ಶಿಬಿರವನ್ನು ಶ್ರೀ ಹುಕ್ಕೇರಿಮಠದ ಸದಾಶಿವ ಮಹಾಸ್ವಾಮಿಗಳು ಚಾಲನೆ ನೀಡಿದರು.ನಂತರ ಮಾತನಾಡಿ ಕಣ್ಣು ಪ್ರತಿ ವ್ಯಕ್ತಿ,ಪ್ರಾಣಿಯ ಬದುಕಿನ ಬೆಳಕು. ಕಣ್ಣಿಲ್ಲದವರ ತೊಂದರೆ ಕಲ್ಪನೆ ಕೂಡ ಕಷ್ಟಕರ. ಕಾರಣ ಕಣ್ಣಿನ ಆರೋಗ್ಯವನ್ನು ಪ್ರತಿ ವ್ಯಕ್ತಿ ಮುಜುವರ್ಜಿಯಿಂದ ನೋಡಿಕೊಳ್ಳಬೇಕು. ಇನ್ನು ನಮ್ಮ ಲಯನ್ಸ್ ಸಂಸ್ಥೆ ಈ ಶಿಬಿರವನ್ನು ಬಹುದಿನಗಳಿಂದ ನಡೆಸುತ್ತಿರುವುದು ಅವರಲ್ಲಿನ ಸಾಮಾಜಿಕ ಕಳಕಳಿಗೆ ಸಾಕ್ಷಿ ಎಂದು ಸಂಸ್ಥೆಯ ಧ್ಯೆಯ ಮತ್ತು ಅದರ ಪದಾಧಿಕಾರಿಗಳ ಪರೋಪಕಾರ ಗುಣಗಳನ್ನು ಶ್ಲಾಘಿಸಿದರು.
ಸ್ಥಳೀಯ ಲಯನ್ಸ್ ಕ್ಲಬ್,ಶ್ರೀ ಹುಕ್ಕೇರಿಮಠ, ಕಂಚಿಕಾಮಕೋಟಿ ಮೆಡಿಕಲ್ ಟ್ರಸ್ಟ್, ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಹುಕ್ಕೇರಿಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಈ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಲಯನ್ಸ್ ಸಂಸ್ಥೆ ಅಧ್ಯಕ್ಷ ಸುಭಾಸ್ ಹುಲ್ಯಾಳದ ಮಾತನಾಡಿ ಕಳೆದ 3ಕ್ಯಾಂಪ್ಗಳಿಗಿಂತ ಈ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಿದ್ದು, ಅವರ ಕಣ್ಣಿನ ಸಮಸ್ಯೆಗಳ ಕುರಿತು ನೇತ್ರ ತಜ್ಞರ ಜೊತೆಗೆ ಚರ್ಚಿಸಿ ಪರಿಹಾರ ಕಂಡುಕೊಂಡಿದ್ದಾರೆ. ಈಗಾಗಲೇ ಈ ಶಿಬಿರದಲ್ಲಿ 110 ಜನರನ್ನು ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ ಸಿಬ್ಬಂದಿ ಉಚಿತ ಶಸ್ತ್ರ ಚಿಕಿತ್ಸೆಗೆ ಆಯ್ಕೆ ಮಾಡಿದ್ದು, ಅವರನ್ನು ನಿಗದಿತ ದಿನದಂದು ಆಸ್ಪತ್ರೆಯ ವಾಹನದಲ್ಲಿಯೇ ಶಿವಮೊಗ್ಗಕ್ಕೆ ಕರೆದೊಯ್ದು ಅಲ್ಲಿ ಶಸ್ತ್ರ ಚಿಕಿತ್ಸೆ ನೆರವೇರಿಸಿ ಪುನಃ ವಾಪಸ್ ಇಲ್ಲಿಗೆ ಕರೆತಂದು ಬಿಡಲಾಗುತ್ತದೆ. ಅಲ್ಲದೇ ನಂತರದ ನಿಗದಿತ ದಿನದಂದು ಪುರ್ನ ತಪಾಸಣೆಗೆ ಬಂದು ಶಸ್ತ್ರಚಿಕಿತ್ಸೆಯ ನಂತರ ಫಲಿತಾಂಶ ಪರೀಕ್ಷೆಗೊಳಪಡಬೇಕೆಂದು ಶಸ್ತ್ರ ಚಿಕಿತ್ಸೆಗೆ ಒಳಗಾದವರಲ್ಲಿ ಮನವಿ ಮಾಡಿದರು. ಅಲ್ಲದೆ ಮುಂದಿನ ದಿನಗಳಲ್ಲಿ ಲಯನ್ಸ್ ಸಂಸ್ಥೆ ಗ್ರಾಮೀಣ ಭಾಗಗಳಲ್ಲಿ ಇದೇ ಮಾದರಿಯ ಉಚಿತ ನೇತ್ರ ತಪಾಸಣೆ ಮಾತ್ರವಲ್ಲ,ಶುಗರ್, ಬಿ.ಪಿ. ಸೇರಿದಂತೆ ಕೆಲ ನಿಗದಿತ ಆರೋಗ್ಯ ಸಮಸ್ಯೆಗಳ ತಪಾಸಣೆ ಮತ್ತು ಅವುಗಳ ಚಿಕಿತ್ಸೆ ಕುರಿತು ಮಾಹಿತಿ ಶಿಬಿರ ನಡೆಸಲಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ವಿರುಪಾಕ್ಷಪ್ಪ ಹಾವನೂರ, ಖಜಾಂಚಿ ಗೀರೀಶ ಬಣಕಾರ, ಶಿವಬಸಪ್ಪ ಮುಷ್ಠಿ, ಮಹಾಂತೇಶ ಮಳಿಮಠ, ಪಿ.ಸಿ.ಹಿರೇಮಠ, ಎ.ಎಚ್. ಕಬ್ಬಿಣಕಂತಿಮಠ, ಎಸ್.ಆರ್. ಮಾಗನೂರ, ಆರ್.ಎಸ್. ಾಗನೂರ,ಆನಂದ ಅಟವಾಳಗಿ,ಸುಭಾಸ ಹುರಳಿಕುಪ್ಪಿ, ರವಿಕುಮಾರ,ಪ್ರಕಾಶ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 