12 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ: ಸಚಿವ ಜಾರಕಿಹೊಳಿ ಹರ್ಷ
ಬೆಂಗಳೂರು, ಫೆ 17 [ಯುಎನ್ಐ] ರಾಜ್ಯ ಬಿಜೆಪಿ ಸರ್ಕಾರ ಆದ್ಯತೆಯ ಮೇರೆಗೆ ಬೃಹತ್ ನೀರಾವರಿ ಯೋಜನೆಗಳನ್ನು ಕೈಗೊಂಡಿದ್ದು, ರಾಜ್ಯದ 12,000 ಹೆಕ್ಟೇರ್ ಪ್ರದೇಶಕ್ಕೆ ಈ ಪ್ರಸಕ್ತ ವರ್ಷದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಸಾಮರ್ಥ್ಯ ತೋರುತ್ತಿರುವುದು ಹೆಮ್ಮೆಯ ಸಂಗತಿ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಲ. ಜಾರಕಿಹೊಳಿ ಹರ್ಷ ವ್ಯಕ್ತಪಡಿಸಿದ್ದಾರೆ.ರಾಜ್ಯಪಾಲರ ವಜೂಬಾಯ್ ವಾಲಾ ಅವರು ಸೋಮವಾರ ರಾಜ್ಯ ವಿಧಾನಮಂಡಲದಲ್ಲಿ ಮಾಡಿದ ಭಾಷಣ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಜಲಸಂಪನ್ಮೂಲ ಇಲಾಖೆಯ ಯೋಜನೆಗಳು, ಭವಿಷ್ಯದ ಕಾರ್ಯಕ್ರಮಗಳ ಕುರಿತು ರಾಜ್ಯಪಾಲರು ಉತ್ಸುಕತೆಯಿಂದ ಮಾತನಾಡಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಲಪ್ರಭಾ ಯೋಜನೆಯ ಕಾಲುವೆಗಳ ಆಧುನೀಕರಣಕ್ಕೆ 1000 ಕೋಟಿ ರೂ.ಗಳ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ವಿಜಯ ನಗರ ಕಾಲುವೆಗಳ ಆಧುನೀಕರಣಕ್ಕೆ 450 ಕೋಟಿ ರೂ.ಗಳನ್ನು ಸರ್ಕಾರ ಒದಗಿಸುತ್ತಿದೆ. ಹಾಗೆಯೇ ಹೇಮಾವತಿ ನಾಲೆಯ ಆಧುನೀಕರಣಕ್ಕೆ 475 ಕೋಟಿ ರೂ ಒದಗಿಸಲಾಗುವುದು. ರಾಜ್ಯದ ಒಟ್ಟು 21 ಮಧ್ಯಮ ಮತ್ತು ಬೃಹತ್ ನೀರಾವರಿ ಯೋಜನೆಗಳಿಗಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟು 4050 ಕೋಟಿ ರೂ.ಗಳನ್ನು ಮೀಸಲಿಡುತ್ತಿದ್ದು ಈ ಕಾರಣಕ್ಕಾಗಿ ತಾವು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅಭಿನಂದಿಸುತ್ತಿರುವುದಾಗಿ ತಿಳಿಸಿದ್ದಾರೆ.ತಾವು ರಾಜ್ಯದ ಜಲ ಸಂಪನ್ಮೂಲ ಸಚಿವನಾಗಿ ಅಧಿಕಾರ ಸ್ವೀಕರಿಸಿದಾಗಲೇ ಹೇಳಿದಂತೆ ಜನತೆಗೆ ಮತ್ತು ರಾಜ್ಯದ ಭೂಮಿಗೆ ನೀರುಣಿಸುವುದು ಮತ್ತು ರಾಜ್ಯದ ಜನರ ಕಣ್ಣೀರು ಒರೆಸುವುದೇ ತಮ್ಮ ಆದ್ಯತೆಯ ಕೆಲಸವಾಗಿದೆ ಎಂದು ಸಚಿವರು ಪುನರುಚ್ಛರಿಸಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 