ಘಟಪ್ರಭಾ ನಗರದ ಜನತಾ ಕಾಲೋನಿಯಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ 135 ನೇಯ ಜಯಂತಿ

ಘಟಪ್ರಭಾ ನಗರದ ಜನತಾ ಕಾಲೋನಿಯಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್  ಅಂಬೇಡ್ಕರ್ ಅವರ 135 ನೇಯ ಜಯಂತಿ 135th birth anniversary of Bharat Ratna Dr. B.R. Ambedkar, architect of the Constitution, celebrated

ಘಟಪ್ರಭಾ 15 :  ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಹೆಚ್‌.ಡಿ ಮುಲ್ಲಾ ಅವರು ಅಂಬೇಡ್ಕರ್ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದ್ದರು. ನಂತರ ಮಾತನಾಡಿದ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಇಂದು ಅವರ ಕೊಡುಗೆಗಳನ್ನು ನೆನೆದು ಸ್ಮರಿಸುವ ದಿನ ಅವರನ್ನು ಗೌರವಿಸುವ ಸುದಿನ ಇಂದಿನ ಪ್ರಜೆಗಳು ಅವರ ಸಂದೇಶಗಳನ್ನು ತಿಳಿದು ಸದಾ ಅನುಸರಿಸಬೇಕು ಎಂದು ಯುವಕರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ಮುಖಂಡ ಸುರೇಶ ಪಾಟೀಲ,ಜಿ.ಪಂ ಮಾಜಿ ಸದ್ಯಸ ಸುಧೀರ ಜೋಡಟ್ಟಿ, ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಶಿ,ಕರ್ನಾಟಕ ರಕ್ಷಣಾ ವೇದಿಕೆ (ಸಂತೋಷ ಅರಳಿಕಟ್ಟಿ ಬಣ)ದ ರಾಜ್ಯಾಧ್ಯಕ್ಷ ಪ್ರಶಾಂತ ಅರಳಿಕಟ್ಟಿ,ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ಮಹಾಜನ,ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಬೆಳಗಾವಿ ಜಿಲ್ಲಾಧ್ಯಕ್ಷ ರಾಜು ದೊಡಮನಿ,ಯಲ್ಲಪ್ಪ ಹಂಚಿನಾಳ,ಸಂದೀಪ ಅರಳಿಕಟ್ಟಿ,ಗೋವಿಂದ ಮೇತ್ರಿ,ಕಿರಣ ರಾಣೆ,ಶಾರುಖ್ ಮುಲ್ಲಾ,ಅನೀಲ ನಡಗೇರಿ,ಅರವಿಂದ ನಡಗೇರಿ ಸೇರಿದಂತೆ ನೂರಾರು ಜನ ಉಪಸ್ಥಿತರಿದ್ದರು.