ಮಂಕಿಯಲ್ಲಿ 14 ಸೆಂ.ಮೀ ಮಳೆ
ಬೆಂಗಳೂರು, ಆಗಸ್ಟ್ 25 ಹವಾಮಾನ ಇಲಾಖೆಯ ಇತ್ತೀಚಿನ ವರದಿಯಂತೆ ಕರಾವಳಿ ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ರಾಜ್ಯದ ಒಳಭಾಗದ ಅನೇಕ ಸ್ಥಳಗಳಲ್ಲಿ ಮಳೆಯಾಗಿದೆ. ಮಳೆಯ ಪ್ರಮಾಣ (ಸೆಂಟಿಮೀಟರ್) ಮಂಕಿ 14, ಹೊನ್ನಾವರ 13, ಶಿರಾಲಿ 9, ಕುಂದಾಪುರ, ಭಟ್ಕಳ 7. ಮಂಗಳೂರು, ಅಂಕೋಲಾ ತಲಾ 5, ಪಣಂಬೂರು, ಮಂಗಳೂರು, ಕುಮಟಾ ತಲಾ 4, ಗೋಕರ್ಣ, ಮಾಣಿ, ಕಾರ್ಕಳ, ಸಿದ್ದಾಪುರ, ಸುಬ್ರಮಣ್ಯ, ಔರಾದ್ ತಲಾ 3, ಯಲ್ಲಾಪುರ, ಕಾರವಾರ, ಕಲ್ಗಟಗಿ, ಲೋಂಡಾ, ಗದಗ, ತುಮಕೂರು, ಭಾಗಮಂಡಲ, ಚಿತ್ರದುರ್ಗ 2 ಸೆಂಟಿಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಭಾನುವಾರ ಬಿಡುಗಡೆಮಾಡಿರುವ ವರದಿ ಹೇಳಿದೆ. ಮುನ್ಸೂಚನೆ ಮಂಗಳವಾರದವರೆಗೆ ಮಾನ್ಯವಾಗಿದೆ: ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಕರ್ನಾಟಕದ ಒಳಭಾಗದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್ ಇದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 