ಬೆಳಗಾವಿ: 14ನೇ ಹಣಕಾಸು ಹಾಗೂ ಉಳಿತಾಯದ ಹಣದಲ್ಲಿ ಕಾಮಗಾರಿಗಳಿಗೆ ಸೂಚನೆ
ಲೋಕದರ್ಶನ ವರದಿ
ಬೆಳಗಾವಿ 17: 14ನೇ ಹಣಕಾಸು ಯೋಜನೆಯಲ್ಲಿ ನಗರದ ಪ್ರತಿ ವಾರ್ಡಗಳಿಗೆ ರೂ. 20 ಲಕ್ಷದಂತೆ ಅಭಿವೃದ್ಧಿ ಕಾಮಗಾರಿಗಳನ್ನು ಹಂಚಿಕೆ ಮಾಡಲಾಗಿದೆ. ಹಂಚಿಕೆ ಮಾಡಲಾದ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಂಡು ಮುಕ್ತಾಯಗೊಳಿಸಲು ಅಧಿಕಾರಿಗಳಿಗೆ ಶಾಸಕ ಅನಿಲ ಬೆನಕೆ ತಿಳಿಸಿದ್ದಾರೆ. ಇಂದು ಮಹಾನಗರ ಪಾಲಿಕೆಯಲ್ಲಿ ನಡೆದ ಅಧಿಕಾರಿಗಳ ಸಭೆ ನಡೆಸಿದ ಅವರು ಯೋಜನೆ ಉಳಿತಾಯದ ಸುಮಾರು 10 ಕೋಟಿ ಹಣದಲ್ಲಿ ನಗರದ ವಾರ್ಡಗಳಿಗೆ ಅಭಿವೃದ್ಧಿ ಕಾರ್ಯಗಳಿಗೆ ಹಣ ಹಂಚಿಕೆ ಮಾಡಲಾಗಿದ್ದು, ಕಾಮಗಾರಿಗಳನ್ನು ಶೀಘ್ರವಾಗಿ ಅಧಿಕಾರಿಗಳು ಮಾಡಬೇಕು ಎಂದರು.
ಮಾನ್ಸೂನ್ನಲ್ಲಿ ತೊಂದರೆಯಾಗದಂತೆ ನಗರದ ಎಲ್ಲ ಗಟಾರುಗಳು, ನಾಲೆಗಳು ಸ್ವಚ್ಛವಾಗಬೇಕು ಎಂದು ಶಾಸಕರು ಸೂಚಿಸಿದ್ದು, ಮಳೆಯಿಂದ ಜನರಿಗೆ ಅನಾನುಕೂಲವಾದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಶಾಸಕ ಅನಿಲ ಬೆನಕೆ ಎಚ್ಚರಿಸಿದ್ದಾರೆ. ಮಳೆಗಾಲದಲ್ಲಿ ಗಟಾರುಗಳು ತುಂಬಿ, ರಸ್ತೆಗಳಲ್ಲಿ ನೀರು ನಿಂತು ಅಪಾರ ತೊಂದರೆಯಾಗುತ್ತಿದೆ. ಸೊಳ್ಳೆಗಳ ನಿಯಂತ್ರಣ ಮಾಡಬೇಕಾದ ಅನಿವಾರ್ಯತೆ ಇದೆ, ಈ ಬಗ್ಗೆ ಹಲವು ದೂರುಗಳನ್ನು ಜನರಿಂದ ಸ್ವೀಕರಿಸಿದ್ದು ಯಾವುದೇ ತೊಂದರೆಯಾಗದಂತೆ ನಗರದಲ್ಲಿ ವ್ಯವಸ್ಥೆಯಾಗಬೇಕು, ಪಾಲಿಕೆ ಆಡಳಿತ ಸಜ್ಜಾಗಬೇಕು ಎಂದು ಶಾಸಕರು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ 