ಬೆಳಗಾವಿ: 14ನೇ ಹಣಕಾಸು ಹಾಗೂ ಉಳಿತಾಯದ ಹಣದಲ್ಲಿ ಕಾಮಗಾರಿಗಳಿಗೆ ಸೂಚನೆ
ಲೋಕದರ್ಶನ ವರದಿ
ಬೆಳಗಾವಿ 17: 14ನೇ ಹಣಕಾಸು ಯೋಜನೆಯಲ್ಲಿ ನಗರದ ಪ್ರತಿ ವಾರ್ಡಗಳಿಗೆ ರೂ. 20 ಲಕ್ಷದಂತೆ ಅಭಿವೃದ್ಧಿ ಕಾಮಗಾರಿಗಳನ್ನು ಹಂಚಿಕೆ ಮಾಡಲಾಗಿದೆ. ಹಂಚಿಕೆ ಮಾಡಲಾದ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಂಡು ಮುಕ್ತಾಯಗೊಳಿಸಲು ಅಧಿಕಾರಿಗಳಿಗೆ ಶಾಸಕ ಅನಿಲ ಬೆನಕೆ ತಿಳಿಸಿದ್ದಾರೆ. ಇಂದು ಮಹಾನಗರ ಪಾಲಿಕೆಯಲ್ಲಿ ನಡೆದ ಅಧಿಕಾರಿಗಳ ಸಭೆ ನಡೆಸಿದ ಅವರು ಯೋಜನೆ ಉಳಿತಾಯದ ಸುಮಾರು 10 ಕೋಟಿ ಹಣದಲ್ಲಿ ನಗರದ ವಾರ್ಡಗಳಿಗೆ ಅಭಿವೃದ್ಧಿ ಕಾರ್ಯಗಳಿಗೆ ಹಣ ಹಂಚಿಕೆ ಮಾಡಲಾಗಿದ್ದು, ಕಾಮಗಾರಿಗಳನ್ನು ಶೀಘ್ರವಾಗಿ ಅಧಿಕಾರಿಗಳು ಮಾಡಬೇಕು ಎಂದರು.
ಮಾನ್ಸೂನ್ನಲ್ಲಿ ತೊಂದರೆಯಾಗದಂತೆ ನಗರದ ಎಲ್ಲ ಗಟಾರುಗಳು, ನಾಲೆಗಳು ಸ್ವಚ್ಛವಾಗಬೇಕು ಎಂದು ಶಾಸಕರು ಸೂಚಿಸಿದ್ದು, ಮಳೆಯಿಂದ ಜನರಿಗೆ ಅನಾನುಕೂಲವಾದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಶಾಸಕ ಅನಿಲ ಬೆನಕೆ ಎಚ್ಚರಿಸಿದ್ದಾರೆ. ಮಳೆಗಾಲದಲ್ಲಿ ಗಟಾರುಗಳು ತುಂಬಿ, ರಸ್ತೆಗಳಲ್ಲಿ ನೀರು ನಿಂತು ಅಪಾರ ತೊಂದರೆಯಾಗುತ್ತಿದೆ. ಸೊಳ್ಳೆಗಳ ನಿಯಂತ್ರಣ ಮಾಡಬೇಕಾದ ಅನಿವಾರ್ಯತೆ ಇದೆ, ಈ ಬಗ್ಗೆ ಹಲವು ದೂರುಗಳನ್ನು ಜನರಿಂದ ಸ್ವೀಕರಿಸಿದ್ದು ಯಾವುದೇ ತೊಂದರೆಯಾಗದಂತೆ ನಗರದಲ್ಲಿ ವ್ಯವಸ್ಥೆಯಾಗಬೇಕು, ಪಾಲಿಕೆ ಆಡಳಿತ ಸಜ್ಜಾಗಬೇಕು ಎಂದು ಶಾಸಕರು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 