ಪಂ.ಪುಟ್ಟರಾಜ ಗವಾಯಿಗಳ 15ನೇ ಪುಣ್ಯಸ್ಮರಣೋತ್ಸವ

ಪಂ.ಪುಟ್ಟರಾಜ ಗವಾಯಿಗಳ 15ನೇ ಪುಣ್ಯಸ್ಮರಣೋತ್ಸವ 15th Commemoration of the Death of Pt. Puttaraja Gawai

ಪಂ.ಪುಟ್ಟರಾಜ ಗವಾಯಿಗಳ 15ನೇ ಪುಣ್ಯಸ್ಮರಣೋತ್ಸವ 


ಗದಗ 16:  ಪಂ. ಪುಟ್ಟರಾಜ ಕವಿ ಗವಾಯಿಗಳವರು ಜಗತ್ತಿನ ಕಲ್ಯಾಣಕ್ಕಾಗಿ ಬದುಕಿದವರು. ಅವರನ್ನು ಜಗತ್ತು ಸದಾಸ್ಮರಿಸುತ್ತದೆ ಎಂದು ನೀಲಗುಂದ  ಶ್ರೀ ಗುದ್ನೇಶ್ವರ ಮಠದ ಪೂಜ್ಯಶ್ರೀ ಪ್ರಭುಲಿಂಗ ಮಹಾಸ್ವಾಮಿಗಳು ಹೇಳಿದರು.  

ಗ್ರಾಮಸ್ಥರ ಸಹಯೋಗದಲ್ಲಿ ಪರಮಪೂಜ್ಯ ಪದ್ಮಭೂಷಣ ಡಾ. ಪಂ. ಪುಟ್ಟರಾಜ ಕವಿ ಶಿವಯೋಗಿಗಳವರ 15ನೇ ಪುಣ್ಯಸ್ಮರಣೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪಂ. ಪಂಚಾಕ್ಷರಿ ಗವಾಯಿಗಳವರ ಕೃಪೆಯಿಂದ  ಪುಟ್ಟರಾಜ ಕವಿ ಗವಾಯಿಗಳು ಅದ್ಭುತ ಲೋಕವನ್ನು ಸೃಷ್ಟಿಸಿದರು. ಗುರುವಿನ ನಿಷ್ಠೆ ಗಟ್ಟಿಯಾದರೆ ಕಷ್ಟಗಳಿಗೆ ಪರಿಹಾರ ಸಿಗುತ್ತದೆ ಎಂಬುದಕ್ಕೆ ಪಂ. ಪುಟ್ಟರಾಜ ಕವಿ ಗವಾಯಿಗಳವರ ಗುರುನಿಷ್ಠೆ ಕಾರಣವಾಗಿದೆ ಎಂದು ಹೇಳಿದರು.  

ನಂತರ ಸಂಜೆ ಐದು ದಿನಗಳವರೆಗೆ ನಿರಂತರವಾಗಿ ನಡೆದ ಮಹಾತ್ಮರ ಬದುಕು ಬೆಳಕು ಪ್ರವಚನ ಕಾರ್ಯಕ್ರಮದ ಮಂಗಲೋತ್ಸ ಜರುಗಿತು. ಪ್ರವಚನಕಾರರಾಗಿ ಶಿವಲಿಂಗಯ್ಯಶಾಸ್ತ್ರಿಗಳು ಹಿರೇಮಠ ಸಿದ್ದಾಪುರವರು ನೆರವೇರಿಸಿದರು. ಸಂಗೀತಗಾರರಾಗಿ ಸಿದ್ದೇಶಕುಮಾರ ಅವರು ತಬಲಾಸಾಥ್ ನೀಡಿದರು.