ಗೋಏರ್ ನಿಂದ 18 ವಿಮಾನ ಸಂಚಾರ ರದ್ದು, ಪ್ರಯಾಣಿಕರಿಗೆ ಅನಾನುಕೂಲ
ನವದೆಹಲಿ, ಡಿ 23, ವಿಮಾನ
ಹಾಗೂ ನುರಿತ ಚಾಲಕ ಸಿಬ್ಬಂದಿ ಕೊರತೆಯ ಕಾರಣ ಬೆಂಗಳೂರು
ದೆಹಲಿ, ಮುಂಬೈ, , ಕೋಲ್ಕತಾ ಮತ್ತು ಪಾಟ್ನಾ ಸೇರಿದಂತೆ 18 ದೇಶಿಯ
ವಿಮಾನ ಗಳ ಸಂಚಾರವನ್ನು ಗೋ ಏರ್ ರದ್ದುಪಡಿಸಿದ್ದು
ಪ್ರಯಾಣಿಕರಿಗೆ ಅನಾನುಕೂಲವಾಗಿದೆ. ಮುಂಬೈ, ಗೋವಾ,
ಬೆಂಗಳೂರು, ದೆಹಲಿ, ಶ್ರೀನಗರ, ಜಮ್ಮು, ಪಾಟ್ನಾ, ಇಂದೋರ್ ಮತ್ತು ಕೋಲ್ಕತ್ತಾ ಸೇರಿದಂತೆ 18 ವಿಮಾನ ಸಂಚಾರವನ್ನು ಗೋಏರ್ ಸೋಮವಾರ ರದ್ದುಗೊಳಿಸಿದೆ. ವಿಮಾನಗಳು ಮತ್ತು ಸಿಬ್ಬಂದಿ ಕೊರತೆ,ಕಾರಣ ಸಂಚಾರ ರದ್ದಾಗಿದೆ ಎನ್ನಲಾಗಿದೆ. ಆದರೆ ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆಯ ಕಾರಣದಿಂದಾಗಿ
ಸೇವೆಗೆ ಅಡ್ಡಿ ಉಂಟಾಗಿದೆ ಎಂದು ಗೋಏರ್ ಹೇಳಿಕೆಯಲ್ಲಿ
ತಿಳಿಸಿದೆ.ಆದರೆ ಸೋಮವಾರ ರದ್ದಾದ ವಿಮಾನಗಳ ನಿಖರ ಸಂಖ್ಯೆಯನ್ನು ವಿಮಾನ ಸಂಸ್ಥೆ ಬಹಿರಂಗಪಡಿಸಿಲ್ಲ ಇದರ ಜೊತೆಗೆ ದೇಶದ ಕೆಲವು ಭಾಗಗಳಲ್ಲಿನ ಪ್ರತಿಕೂಲ ಹವಾಮಾನ,
ಮಂದಬೆಳಕು , ಮತ್ತು ಸಿಎಎ ವಿರೋಧಿ ಪ್ರತಿಭಟನೆಗಳು ಸಹ ಇದಕ್ಕೆ ಕಾರಣ ಎನ್ನಲಾಗಿದೆ ಆದರೆ ವಿಮಾನಗಳ ಹಠಾತ್ ರದ್ದತಿಯಿಂದ ಪ್ರಯಾಣಿಕರಿಗೆ ಸಾಕಷ್ಟು
ಅನಾನುಕೂಲತೆ ಉಂಟಾಗಿದೆ ಗೋಏರ್ ಬೆಳಿಗ್ಗೆ ವಿಮಾನ
ರದ್ದಾಗಿದೆ ಎಂದು ಸಂದೇಶ ಕಳುಹಿಸಿದೆ ಕೊನೆ ಘಳಿಕೆಯಲ್ಲಿ
ನಾನು ಏನು ಮಾಡಬೇಕು ಎಂದು ಪ್ರಯಾಣಿಕರೊಬ್ಬರು ಟ್ವೀಟ್ ಮಾಡಿದ್ದಾರೆ.ಆದರೂ ಪ್ರಯಾಣಿಕರ
ಅನಾನುಕೂಲತೆ ಕಡಿಮೆ ಮಾಡಲು ಸಾಧ್ಯವಿರುವ
ಎಲ್ಲ ಉಪಕ್ರಮ ಪ್ರಾರಂಭಿಸುವುದಾಗಿಯೂ ಎಂದು ವಿಮಾನಯಾನ ಸಂಸ್ಥೆ ಭರವಸೆ ನೀಡಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 