ಅರ್ಚಕರಿಗೆ ಪ್ರತಿ ತಿಂಗಳಿಗೆ 18000 ಗೌರವ ವೇತನ
18000 per month honorarium for priests
ನವದೆಹಲಿ 30: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ಅಧಿಕಾರಕ್ಕೆ ಮರಳಿದರೆ ದೇವಾಲಯ ಮತ್ತು ಗುರುದ್ವಾರದ ಅರ್ಚಕರಿಗೆ ತಿಂಗಳಿಗೆ ತಲಾ ₹18,000 ಭತ್ಯೆ ನೀಡುವುದಾಗಿ ಎಎಪಿ ವರಿಷ್ಠ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ.
ಸೋಮವಾರ(ಡಿ.30) ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕೇಜ್ರಿವಾಲ್ ಬಿಜೆಪಿಯವರು ಮಹಾರಾಷ್ಟ್ರ ಮತ್ತು ಹರ್ಯಾಣದಲ್ಲಿ ಗೆದ್ದಂತೆ ದೆಹಲಿಯಲ್ಲೂ ಗೆಲ್ಲಬಹುದು ಎಂಬ ನಂಬಿಕೆಯಲ್ಲಿ ಇದ್ದಾರೆ ಆದರೆ ದೆಹಲಿಯ ಜನ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಬಿಜೆಪಿ ಸುಳ್ಳು ಭರವಸೆಗಳನ್ನು ನೀಡಿ ಮತದಾರರ ದಾರಿ ತಪ್ಪಿಸುವ ಯತ್ನವನ್ನು ಮಾಡುತ್ತಿದೆ ಆದರೆ ಇದು ಯಾವುದೂ ಕೆಲಸ ಮಾಡಲ್ಲ ದೆಹಲಿಯ ಜನತೆಗೆ ಆಮ್ ಆದ್ಮಿ ಪಕ್ಷ ಏನು ಎಂದು ಗೊತ್ತಿದೆ ಇದುವರೆಗೆ ಕೊಟ್ಟ ಭರವಸೆಯನ್ನು ಯಾವುದೇ ಕಾರಣಕ್ಕೂ ಬಾಕಿ ಉಳಿಸಿಕೊಂಡಿಲ್ಲ ಹಾಗಾಗಿ ಮುಂದಿನ ಚುನಾವಣೆಯಲ್ಲಿ ಮತದಾರರು ನಮ್ಮ ಕೈ ಹಿಡಿಯಲಿದ್ದಾರೆ ಎಂದು ಹೇಳಿದ್ದಾರೆ.
ದೇವಸ್ಥಾನದ ಅರ್ಚಕರು ಹಾಗೂ ಗುರುದ್ವಾರದ ಗುರುಗಳು ನೋಂದಣಿ ಮಾಡಿಕೊಳ್ಳಬೇಕು. ಮಂಗಳವಾರ ಡಿ.30ರಂದು ನೋಂದಣಿ ಆರಂಭಗೊಳ್ಳಲಿದ್ದು, ಕನ್ನಾಟ್ ನಲ್ಲಿರುವ ಹನುಮಾನ್ ದೇವಾಲಯದಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭಿಸುವುದಾಗಿ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ, ಇದಾದ ಬಳಿಕ ತಮ್ಮ ತಮ್ಮ ಕ್ಷೇತ್ರದ ಅಭ್ಯರ್ಥಿಗಳು ತಮ್ಮ ಕ್ಷೇತ್ರದಲ್ಲಿ ನೋಂದಣಿ ಮಾಡಿಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 