2.53 ಕೋಟಿರೂ ನಿಷೇಧಿತ ಗುಟ್ಕಾ ವಶ : ಇಬ್ಬರ ಬಂಧನ
ಥಾಣೆ, ಫೆಬ್ರವರಿ 8, ಮಹಾರಾಷ್ಟ್ರದ ಭಿವಾಂಡಿ ಪಟ್ಟಣದಲ್ಲಿ 2.53 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ಗುಟ್ಕಾ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ಈ ಪ್ರದೇಶದಲ್ಲಿನ ಗೋದಾಮುಗಳ ಮೇಲೆ ಜಂಟಿಯಾಗಿ ದಾಳಿ ನಡೆಸಿ ನಿಷೇಧಿತ ಗುಟ್ಕಾವನ್ನು ವಶಪಡಿಸಿಕೊಂಡಿದ್ದಾರೆ. ಅಪರಾಧದಲ್ಲಿ ಭಾಗಿಯಾಗಿದ್ದ ಎಂಟು ಜನರ ಪೈಕಿ ಸದ್ಯ ಇಬ್ಬರನ್ನು ಬಂಧಿಸಲಾಗಿದೆ ಎಂದು ಎಫ್ಡಿಎ ಥಾಣೆ, ಶಿವಾಜಿ ದೇಸಾಯಿ ಮತ್ತು ಭಿವಾಂಡಿ ವಲಯದ ಡಿಸಿಪಿ ಜಂಟಿ ಆಯುಕ್ತ ರಾಜ್ಕುಮಾರ್ ಶಿಂಧೆ ತಿಳಿಸಿದ್ದಾರೆ. ಈ ಸಂಬಂಧ 14 ಲಕ್ಷ ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಬಂಧಿತರನ್ನು ನಾಗೇಂದ್ರ ಕುಮಾರ್ ಯಾದವ್ (27) ಮತ್ತು ವಿಲಾಸ್ ಮಾಂಡವ್ಕರ್ (28) ಎಂದೂ ಗುರುತಿಸಲಾಗಿದೆ.
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ 