2.53 ಕೋಟಿರೂ ನಿಷೇಧಿತ ಗುಟ್ಕಾ ವಶ : ಇಬ್ಬರ ಬಂಧನ
ಥಾಣೆ, ಫೆಬ್ರವರಿ 8, ಮಹಾರಾಷ್ಟ್ರದ ಭಿವಾಂಡಿ ಪಟ್ಟಣದಲ್ಲಿ 2.53 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ಗುಟ್ಕಾ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ಈ ಪ್ರದೇಶದಲ್ಲಿನ ಗೋದಾಮುಗಳ ಮೇಲೆ ಜಂಟಿಯಾಗಿ ದಾಳಿ ನಡೆಸಿ ನಿಷೇಧಿತ ಗುಟ್ಕಾವನ್ನು ವಶಪಡಿಸಿಕೊಂಡಿದ್ದಾರೆ. ಅಪರಾಧದಲ್ಲಿ ಭಾಗಿಯಾಗಿದ್ದ ಎಂಟು ಜನರ ಪೈಕಿ ಸದ್ಯ ಇಬ್ಬರನ್ನು ಬಂಧಿಸಲಾಗಿದೆ ಎಂದು ಎಫ್ಡಿಎ ಥಾಣೆ, ಶಿವಾಜಿ ದೇಸಾಯಿ ಮತ್ತು ಭಿವಾಂಡಿ ವಲಯದ ಡಿಸಿಪಿ ಜಂಟಿ ಆಯುಕ್ತ ರಾಜ್ಕುಮಾರ್ ಶಿಂಧೆ ತಿಳಿಸಿದ್ದಾರೆ. ಈ ಸಂಬಂಧ 14 ಲಕ್ಷ ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಬಂಧಿತರನ್ನು ನಾಗೇಂದ್ರ ಕುಮಾರ್ ಯಾದವ್ (27) ಮತ್ತು ವಿಲಾಸ್ ಮಾಂಡವ್ಕರ್ (28) ಎಂದೂ ಗುರುತಿಸಲಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 