ಸ್ವಾಮೀಜಿ ವೇಷದಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ: 180 ಗ್ರಾಂ ಚಿನ್ನಾಭರಣ ವಶ
ಬೆಂಗಳೂರು, ಫೆ 20, ಸ್ವಾಮೀಜಿ ವೇಷ ಧರಿಸಿ ಪೂಜೆ ಮಾಡುವ ನೆಪದಲ್ಲಿ ಮನೆಗಳಿಗೆ ಬಂದು, ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ, 180 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ನಾಗರಾಜ್, ಲಕ್ಷ್ಮಣ್ ಬಂಧಿತ ಆರೋಪಿಗಳು.ಬಂಧಿತರು ಮೊದಲು ಸ್ವಾಮೀಜಿಗಳಂತೆ ವೇಷ ಧರಿಸಿ ಮನೆ ಪ್ರವೇಶ ಮಾಡಿ, ನಂತರ ನಿಮ್ಮ ಮನೆಯಲ್ಲಿ ದೋಷವಿದೆ ಎಂದು ಹೇಳುತ್ತಿದ್ದರು.
ದೋಷ ನಿವಾರಣೆಗೆ ಪೂಜೆ, ಹವನ ಮಾಡಿಸಬೇಕು ಎಂದು ಮನೆ ಮಾಲೀಕನನ್ನು ನಂಬಿಸುತ್ತಿದ್ದರು. ಆ ಪೂಜೆಗೆ ಮನೆಯಲ್ಲಿದ್ದ ಚಿನ್ನ, ಒಡವೆಗಳನ್ನೆಲ್ಲ ಇಡುವಂತೆ ತಿಳಿಸುತ್ತಿದ್ದರು. ಹಾಗೇ ಮಾತನಾಡುತ್ತ, ಮನೆಯ ಬಗ್ಗೆ ಸಂಪೂರ್ಣ ವಿವರಣೆಯನ್ನೂ ಪಡೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ದೊಡ್ಡ ದೊಡ್ಡ ಮನೆಗಳನ್ನೇ ಕೇಂದ್ರಿಕರಿಸುತ್ತಿದ್ದ ಇವರು ಮನೆಯಲ್ಲಿ ಚಿನ್ನದ ಒಡವೆಗಳು ಎಷ್ಟಿವೆ, ಎಲ್ಲಿಡುತ್ತಾರೆ ಎಂಬುದನ್ನೆಲ್ಲ ಕಲೆಹಾಕುತ್ತಿದ್ದರು. ನಂತರ ರಾತ್ರಿ ಸಮಯದಲ್ಲಿ ಬಂದು ಕಳ್ಳತನ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಈ ಬಗ್ಗೆ ದೂರುಗಳು ದಾಖಲಾದ ಹಿನ್ನೆಲೆಯಲ್ಲಿ ಸಂಪಿಂಗೆಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ, ಇಬ್ಬರನ್ನು ಬಂಧಿಸಿ 180 ಗ್ರಾಂ.ಗೂ ಹೆಚ್ಚು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 