ಮಹಾನಗರ ಪಾಲಿಕೆ ವತಿಯಿಂದ 2 ಮುಕ್ತಿವಾಹನಗಳ ಲೋಕಾರೆ್ಣ
2 Mukti Vahanas launched by the Metropolitan Corporation
ಬೆಳಗಾವಿ 25: ಇಲ್ಲಿನ ಮಹಾನರ ಪಾಲಿಕೆ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ ಅಂತ್ಯ ಸಂಸ್ಕಾರ ಮಾಡುವ ನಿಟ್ಟಿನಲ್ಲಿ, ಪಾಲಿಕೆಯು ನೂತನ ಎರಡು ಅತ್ಯಾಧುನಿಕ ಮುಕ್ತಿ ವಾಹನಗಳನ್ನು, ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್, ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ, ಮಹಾಪೌರ ಮಂಗೇಶ್ ಪವಾರ್, ಉಪ ಮಹಾಪೌರ ವಾಣಿ ಜೋಷಿ, ನೇತ್ರತ್ವದಲ್ಲಿ ಹಸಿರು ನಿಶಾನೆ ತೋರಿಸುವುದರ ಮೂಲಕ ಲೋಕಾರೆ್ಣಗೊಳಿಸಿದರು.
ನೂತನ ಎರಡು ಶವಗಾರ ವಾಹನಗಳನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ, ಶಾಸಕ ಆಸೀಫ್ ಸೇಠ್ ಅವರು ಬೆಳಗಾವಿ ಮಹಾನಗರ ಪಾಲಿಕೆಯ ವತಿಯಿಂದ 2 ಅತ್ಯಾಧುನಿಕ ಮುಕ್ತಿವಾಹನ ಶವವಾಹಕಗಳನ್ನು ಖರೀದಿಸಲಾಗಿದೆ. ಮುಂಬರುವ ದಿನಗಳಲ್ಲಿ ಇನ್ನೆರಡು ವಾಹನಗಳನ್ನು ಖರೀದಿಸುವ ಚಿಂತನೆಯಿದೆ. ಅಧಿಕಾರಿಗಳು ಈಗಾಗಲೇ ಕೆಲಸ ನಿರ್ವಹಿಸುತ್ತಿದ್ದು, ಡೈರಿ ಮೆಂಟೆನ್ ಮಾಡಿ ವಾಹನಗಳನ್ನು ನಿರ್ವಹಿಸಬೇಕು.
ಎಲ್ಲರೂ ಒಗ್ಗೂಡಿ ಬೆಳಗಾವಿಯ ಅಭಿವೃದ್ಧಿಗೆ ಶ್ರಮಿಸೋಣ ಎಂದು ಹೇಳಿದರು. ಕಳೆದ ಬಾರಿ ಶವ ಸಂಸ್ಥಾನದ ವಾಹನಗಳ ಎಂಜಿನ್ ಸೀಜ್ ಆಗಿದೆ. ಅದೇ ರೀತಿ ಮತ್ತೆ ಮರುಕಳಿಸಿದರೇ, ಅದಕ್ಕೆ ಪಾಲಿಕೆಯ ಅಧಿಕಾರಿಗಳೆ ನೇರ ಹೊಣೆಯಾಗಲಿದ್ದಾರೆ. ಹಾಗೂ ನಿಮ್ಮ ವೇತನದಲ್ಲೇ ಅವುಗಳನ್ನು ಕಡಿತಗೊಳಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಪಾಲಿಕೆ ಆಯುಕ್ತ ಕಾರ್ತಿಕ್ ಎಮ್, ನಗರ ಸೇವಕರು, ಪಾಲಿಕೆ ಅಧಿಕಾರಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 