ಚಿಕ್ಕೋಡಿ ತಾಲೂಕಿನ 4 ಏತ ನೀರಾವರಿ ಯೋಜನೆಗೆ 2 ಕೋಟಿ ಅನುದಾನ ಮಂಜೂರು
2 crore grant sanctioned for 4 lift irrigation projects in Chikkodi taluk
ಚಿಕ್ಕೋಡಿ 07: ಚಿಕ್ಕೋಡಿ- ಸದಲಗಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ತಾಲೂಕಿನ ಇಂಗಳಿ, ಯಕ್ಸಂಬಾ ಹಾಗೂ ಯಡೂರವಾಡಿ ಗ್ರಾಮಗಳ ರೈತರ ಖುಷ್ಕಿ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ನಾಲ್ಕು ಏತ ನೀರಾವರಿ ಯೋಜನೆಗಳಿಗೆ ಒಟ್ಟು 2 ಕೋಟಿ ಅನುದಾನ ಮಂಜೂರು ಮಾಡಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ತಿಳಿಸಿದರು.
ಯಕ್ಸಂಬಾ ಪಟ್ಟಣದಲ್ಲಿ ಮಂಜೂರಾದ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು, ರೈತರು ತಮ್ಮ ಜಮೀನುಗಳಿಗೆ ಏತ ನೀರಾವರಿ ಯೋಜನೆಗಳನ್ನು ಮಂಜೂರು ಮಾಡುವಂತೆ ಮನವಿ ಸಲ್ಲಿಸಿದ್ದ ಹಿನ್ನೆಲೆ ಬೇಡಿಕೆಯ ಅನುಗುಣವಾಗಿ ಯೋಜನೆಗಳನ್ನು ಅನುಮೋದಿಸಲಾಗಿದೆ ಎಂದರು. ಈ ಯೋಜನೆಗಳಿಂದ ಒಟ್ಟು 159.01 ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ದೊರೆಯಲಿದ್ದು, ಗುಣಮಟ್ಟದ ಕಾಮಗಾರಿ ಮೂಲಕ ರೈತರು ಉತ್ತಮ ಬೆಳೆ ಬೆಳೆದು ಆರ್ಥಿಕವಾಗಿ ಮುಂದುವರೆಯಲು ಅನುಕೂಲವಾಗಲಿದೆ ಎಂದು ಹೇಳಿದರು.ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದ್ದು, ಕಾಮಗಾರಿಯನ್ನು ತಕ್ಷಣ ಅನುಷ್ಠಾನಗೊಳಿಸುವಂತೆ ಸಂಬಂಧಪಟ್ಟ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಅನುದಾನ ವಿವರ: ಇಂಗಳಿ ಗ್ರಾಮ (ಮೋಹನ ನಾಮದೇವ ಪಾಟೋಳೆ ಹಾಗೂ ಇತರರು) 51.19 ಎಕರೆ ಜಮೀನುಗಳಿಗೆ ಕೃಷ್ಣಾ ನದಿಯಿಂದ ಏತ ನೀರಾವರಿ ಯೋಜನೆಗೆ 83 ಲಕ್ಷ ಅನುದಾನ. ಇಂಗಳಿ ಗ್ರಾಮ (ವಿನಾಯಕ ಬಸಪ್ಪಾ ಚೌಗುಲೆ ಹಾಗೂ ಇತರರು) 45.25 ಎಕರೆ ಜಮೀನುಗಳಿಗೆ ಕೃಷ್ಣಾ ನದಿಯಿಂದ ಏತ ನೀರಾವರಿ ಯೋಜನೆಗೆ 55 ಲಕ್ಷ ರೂ ಅನುದಾನ. ಯಕ್ಸಂಬಾ ಗ್ರಾಮ (ತಾನಾಜಿ ದತ್ತು ಪವಾರ ಹಾಗೂ ಇತರರು) 24.37 ಎಕರೆ ಜಮೀನುಗಳಿಗೆ ದೂಧಗಂಗಾ ನದಿಯಿಂದ ಏತ ನೀರಾವರಿ ಯೋಜನೆಗೆ 42 ಲಕ್ಷ ರೂ ಅನುದಾನ. ಯಡೂರವಾಡಿ ಗ್ರಾಮ (ಸದಾಶಿವ ದುಂಡಪ್ಪಾ ಸಾವಳೆ ಹಾಗೂ ಇತರರು) 37 ಎಕರೆ ಜಮೀನುಗಳಿಗೆ ಏತ ನೀರಾವರಿ ಯೋಜನೆಗೆ 20 ಲಕ್ಷ ರೂ ಅನುದಾನ ಮಂಜೂರಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಗಣೇಶ ಹುಕ್ಕೇರಿ, ಹೂವಣ್ಣಾ ಚೌಗುಲಾ, ರಮೇಶ ಮುರಚಿಟ್ಟೆ, ಚಂದ್ರಕಾಂತ ಲಂಗೋಟೆ, ವಿಶ್ವನಾಥ ಮಾನೆ, ಸಂಜು ಪಿರಾಜೆ, ಅಜೀತ ಕಿಲ್ಲೇದಾರ, ಶಿವಾಜಿ ಪವಾರ, ಗಜು ಚಿನುಮನೆ, ಸದಾಶಿವ ಕುಂಬಾರ ಸೇರಿದಂತೆ ರೈತ ಫಲಾನುಭವಿಗಳ ಮುಖಂಡರು ಉಪಸ್ಥಿತರಿದ್ದರು.
ಚಿಕ್ಕೋಡಿ ತಾಲೂಕಿನ ರೈತರಿಗೆ ನೀರಾವರಿ ಸೌಲಭ್ಯ ದೊರೆಯುವುದು ನಮ್ಮ ಮೊದಲ ಆದ್ಯತೆ. ಏತ ನೀರಾವರಿ ಯೋಜನೆಗಳಿಂದ ಖುಷ್ಕಿ ಜಮೀನುಗಳಿಗೂ ನೀರು ಸಿಗಲಿದ್ದು, ರೈತರು ಉತ್ತಮ ಬೆಳೆ ಬೆಳೆದು ಆರ್ಥಿಕವಾಗಿ ಸದೃಢರಾಗಲು ಸಹಕಾರಿಯಾಗಲಿದೆ.
ಗಣೇಶ ಹುಕ್ಕೇರಿ ಶಾಸಕರು ಚಿಕ್ಕೋಡಿ- ಸದಲಗಾ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 