ದಾಂಡೇಲಿಯಿಂದ ಬೆಂಗಳೂರಿಗೆ 2 ಪಲ್ಲಕ್ಕಿ ಬಸ್ಗಳ ಸೇವೆ
2 palanquin buses service from Dandeli to Bengaluru
ದಾಂಡೇಲಿ - ಮಾ. 30 : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ದಾಂಡೇಲಿಯಿಂದ ಬೆಂಗಳೂರಿಗೆ 2 ಪಲ್ಲಕ್ಕಿ ಬಸ್ಗಳ ಸೇವೆಯನ್ನು ಪ್ರಾರಂಭಿಸಲಾಗಿದೆ. ಈ ಬಸ್ಗಳನ್ನು ಸ್ಥಳೀಯ ಶಾಸಕ ಆರ್.ವಿ. ದೇಶಪಾಂಡೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿಯವರು ಇತ್ತಿಚಿಗೆ ದಾಂಡೇಲಿಗೆ ಆಗಮಿಸಿದಾಗ ದಾಂಡೇಲಿಯಿಂದ ಬೆಂಗಳೂರಿಗೆ, ಬೆಂಗಳೂರಿನಿಂದ ದಾಂಡೇಲಿಗೆ ಪ್ರಯಾಣಿಕರ ಅನಕೂಲಕ್ಕಾಗಿ ಹವಾನಿಯಂತ್ರಿತ ಎರಡು ಪಲ್ಲಕ್ಕಿ ಬಸ್ಗಳನ್ನು ಬಿಡುವ ಭರವಸೆಯನ್ನು ನೀಡಿದ್ದರು. ಅವರು ನೀಡಿದ ಭರವಸೆಯಂತೆ 15 ದಿನದೊಳಗಾಗಿ ಬಸ್ ಸಂಚಾರ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ, ಉಪಾಧ್ಯಕ್ಷ ಬಶೀರ ಗಿರಿಯಾಳ, ಮಾಜಿ ನಗರಸಭಾ ಅಧ್ಯಕ್ಷ ತಸ್ವರ ಸೌದಾಗರ, ಯಾಸ್ಮೀನ ಕಿತ್ತೂರ, ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ರೇಣುಕಾ ಬದಂ , ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ರಿಯಾಜ್ ಬಾಬು ಸೈಯ್ಯದ್, ಉಸ್ಮಾನ ಶೇಖ ಮತ್ತಿತರರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 