ಕೂಲಿ ಕಾರ್ಮಿಕರಿಗೆ 2 ಸಾವಿರ ರೂ. ಸಹಾಯಧನ ನೀಡಲು ಒತ್ತಾಯ
ಬೆಂಗಳೂರು, ಏ.28,ಲಾಕ್ಡೌನ್ದಿಂದ ತೊಂದರೆಯಲ್ಲಿರುವ ಕಟ್ಟಡ ಕೂಲಿ ಕಾರ್ಮಿಕರಿಗೆ ಸರ್ಕಾರ ಘೋಷಣೆ ಮಾಡಿರುವ 2 ಸಾವಿರ ರೂ.ಸಹಾಯಧನ ಕೂಡಲೇ ಕೊಡುವ ವ್ಯವಸ್ಥೆಮಾಡಬೇಕು ಎಂದು ಫೆಡರೇಶನ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ರಾಜ್ಯ ಸಮಿತಿ ಸದಸ್ಯರು ಅಜೀಜ್ ಜಾಗಿರ್ದಾರ್ ಒತ್ತಾಯಿಸಿದ್ದಾರೆ.ಕೂಲಿ ಕಾರ್ಮಿಕರು ಮತ್ತು ರೈತರು ಕಷ್ಟದಲ್ಲಿದ್ದು, ಕೂಡಲೇ ಸರ್ಕಾರ ಅವರ ಸಹಾಯಕ್ಕೆ ಧಾವಿಸಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.ಕೇಂದ್ರ ಸರ್ಕಾರದಲ್ಲಿ ಪಿಎಂ ಕೇರ್ಸ್ನಲ್ಲಿ 10 ಸಾವಿರ ಕೋಟಿ ರೂ.ಗಳಷ್ಟು ಹಣ ಲಾಕ್ಡೌನ್ ಆಗಿದೆ. ಪ್ರಧಾನಿಯವರು ಕೂಡಲೇ ಆ ಹಣವನ್ನು ರಾಜ್ಯಗಳಿಗೆ ಹಂಚಿಕೆ ಮಾಡಬೇಕು. ಕಷ್ಟದಲ್ಲಿರುವವರಿಗೆ ಸಹಾಯ ಚಾಚಲು ರಾಜ್ಯ ಸರ್ಕಾರಗಳಿಗೆ ನೆರವಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ. ಸರ್ಕಾರಿ, ಸಹಕಾರಿ ಬ್ಯಾಂಕುಗಳು, ಸಹಕಾರಿ ಸಂಸ್ಥೆಗಳು ಹಾಗೂ ಮೈಕ್ರೋ ಫೈನಾನ್ಸಗಳು ಮೂರು ತಿಂಗಳವರೆಗೆ ಯಾವುದೇ ಸಾಲಗಾರರಿಂದ ಹಣ ವಸೂಲಿಗೆ ಮುಂದಾಗಬಾರದು. ಒಂದು ಇಂತಹ ಕಷ್ಟದ ಪರಿಸ್ಥಿತಿಯಲ್ಲಿಯೂ ಸಾಲ ವಸೂಲಾತಿಗೆ ಮುಂದಾದರೇ ಅಂತಹ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಲು ಸರಕಾರ ಮುಂದಾಗಬೇಕು ಅಜೀಜ್ ಜಾಗಿರ್ದಾರ್ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 