ಆಮ್ಸ್ಟರ್ಡ್ಯಾಂ ನಿಂದ ಬೆಂಗಳೂರಿಗೆ ಬಂದಿಳಿದ 206 ಅನಿವಾಸಿ ಭಾರತೀಯರು
ಬೆಂಗಳೂರು, ಜೂ 12,ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ನೆದರ್ಲ್ಯಾಂಡ್ಸ್ನ ರಾಜಧಾನಿ ಆಮ್ಸ್ಟರ್ಡ್ಯಾಂನಲ್ಲಿ ಸಿಲುಕಿದ್ದ 206 ಅನಿವಾಸಿ ಭಾರತೀಯರು ಶುಕ್ರವಾರ ಬೆಳಗ್ಗೆ 9.15ಕ್ಕೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.ಈ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಇವರಲ್ಲಿ 2 ಮಕ್ಕಳು, 204 ಪುರುಷರು ಮತ್ತು ಮಹಿಳೆಯರಿದ್ದಾರೆ ಎಂದರು. ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 206 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೊನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಸದ್ಯ ಅವರೆಲ್ಲರನ್ನೂ ಕ್ವಾರಂಟೈನ್ ಗೆ ಕಳುಹಿಸಿಕೊಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 