211 ಕಲಾವಿದರಿಂದ 'ಸ್ವಾವಲಂಬಿ ಭಾರತ' ಪ್ರೇರಿತ ಹಾಡು
ನವದೆಹಲಿ, ಮೇ 18, ಜಾಗತಿಕ ಸಾಂಕ್ರಾಮಿಕ ಕೊರೊನಾದ ಹರಡುವಿಕೆಯನ್ನು ತಡೆಯಲು ರಾಷ್ಟ್ರವ್ಯಾಪಿ ಲಾಕ್ ಡೌನ್ ಮಾಡಲಾಗಿದ್ದು, ಈ ಮಧ್ಯೆ 211 ಕಲಾವಿದರು 'ಸ್ವಾವಲಂಬಿ ಭಾರತ' ಪ್ರೇರಿತವಾದ ಹಾಡನ್ನು ಹಾಡಿದ್ದಾರೆ.ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಜನರ ಉತ್ಸಾಹವನ್ನು ಹೆಚ್ಚಿಸುವ ಸಲುವಾಗಿ, ದೇಶಾದ್ಯಂತದ ಜನಪ್ರಿಯ ಗಾಯಕರು ಒಂದು ಹಾಡನ್ನು ರಚಿಸಿದ್ದಾರೆ. ಇದು ದೇಶದ ವಿಷಮ ಪರಿಸ್ಥಿತಿಯಲ್ಲಿ ಜನರನ್ನು ರೋಮಾಂಚನಗೊಳಿಸುವಂತೆ ವಿನ್ಯಾಸಗೊಳಿಸಲಾಗಿದೆ. ಈ ಹಾಡಿನ ಪೂರ್ಣ ಹೆಸರು 'ಒನ್ ನೇಷನ್ ಒನ್ ವಾಯ್ಸ್ - ಜಯತು ಜಯತು ಭಾರತಮ್'.ದೇಶದ 200 ಕ್ಕೂ ಹೆಚ್ಚು ಪ್ರಸಿದ್ಧ ಗಾಯಕರು ಜಯತು ಜಯತು ಭಾರತಂ ಗೀತೆಗೆ ಧ್ವನಿ ನೀಡಿದ್ದಾರೆ. ಆಶಾ ಭೋಸ್ಲೆ, ಎಸ್ಪಿ ಬಾಲಸುಬ್ರಹ್ಮಣ್ಯಂ, ಶಂಕರ್ ಮಹಾದೇವನ್, ಸೋನು ನಿಗಮ್ ಮತ್ತು ಕೈಲಾಶ್ ಖೇರ್ ಅವರು ಸಹ ಗೀತೆಗೆ ಧ್ವನಿ ಗೂಡಿಸಿದ್ದಾರೆ. ಈ ಹಾಡನ್ನು ಪ್ರಸೂನ್ ಜೋಶಿ ಬರೆದಿದ್ದು, ಈ ಹಾಡನ್ನು 12 ಭಾಷೆಗಳಲ್ಲಿ ಸಂಯೋಜಿಸಲಾಗಿದೆ. ಸುರ್-ಸಾಮ್ರಾಜ್ಞಿ ಲತಾ ಮಂಗೇಶ್ಕರ್ ಅವರು "ನಮಸ್ಕರ್" ಹಾಡಿನ ಬಗ್ಗೆ ಟ್ವೀಟ್ ಮಾಡಿದ್ದಾರೆ. ನಮ್ಮ ಅತ್ಯಂತ ಪ್ರತಿಭಾವಂತ 211 ಕಲಾವಿದರು ಈ ಹಾಡನ್ನು ಸಂಯೋಜಿಸಿದ್ದಾರೆ. ಇದು ಸ್ವಾವಲಂಬಿ ಭಾರತದ ಉತ್ಸಾಹದಿಂದ ಪ್ರೇರಿತವಾಗಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 