22 ದಿನ ಆಯ್ತು ಅತ್ತೆ, ಮಾವ ಹೇಗಿದ್ದಾರೋ ಗೊತ್ತಿಲ್ಲ: ಊರ್ಮಿಳಾ ಮಾತೋಂಡ್ಕರ್
ನವದೆಹಲಿ, ಆ 30 ಕಣಿವೆಯಲ್ಲಿ 370ನೇ ವಿಧಿಯನ್ನು ರದ್ದುಪಡಿಸಿ ಕೆಲನಿರ್ಬಂಧ ಹಾಕಿದ ನಂತರ ಕಳೆದ 22 ದಿನಗಳಿಂದ ತಂದೆ,ತಾಯಿ ಜೊತೆ ನನ್ನ ಪತಿ ಮಾತನಾಡಿಲ್ಲ ಎಂಬ ವೇದನೆಯನ್ನು ನಟಿ, ರಾಜಕಾರಣಿ ಊರ್ಮಿಳಾ ಮಾತೋಂಡ್ಕರ್ ಹೊರ ಹಾಕಿದ್ದಾರೆ. ಇಂಟರ್ ನೆಟ್ ನಿರ್ಬಂಧದ ಕಾರಣ ಕಳೆದ 22 ದಿನಗಳಿಂದ ಕಾಶ್ಮೀರದಲ್ಲಿ ವಾಸವಾಗಿರುವ ತನ್ನ ಹೆತ್ತವರೊಂದಿಗೆ ಮಾತನಾಡಲು ಪತಿಗೆ ಸಾಧ್ಯವಾಗುತ್ತಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ. ರಾಜ್ಯಪಾಲ ಮಲಿಕ್ ವಿದೇಶದಲ್ಲಿ ಇರುವ ಮಗನ ಜೊತೆ ಮಾತನಾಡಲು ಆಗುತ್ತಿಲ್ಲ ಎಂದು ಪತ್ರಿಕೆಯೊಂದಿಗೆ ನೋವು, ಸಂಕಟ ತೋಡಿಕೊಂಡ ಬಳಿಕ ನಟಿಯ ಸಂಕಟವೂ ಹೊರಬಿದ್ದಿದೆ. 370ನೇ ವಿಧಿಯನ್ನು ರದ್ದುಪಡಿಸಿದ ಕ್ರಮ ಸರಕಾರ ಅಮಾನವೀಯ ಕ್ರಮವಾಗಿದೆ ಎಂದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ನಿಂದ ಸ್ಪರ್ಧಿಸಿ ಸೋಲು ಕಂಡಿದ್ದ ಮಾತೋಂಡ್ಕರ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ನನ್ನ ಮಾವ ಮತ್ತು ಅತ್ತೆ ಅಲ್ಲಿಯೇ ಇದ್ದಾರೆ, ಅವರಿಬ್ಬರೂ ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ, 22 ದಿನ ಕಳೆದಿದ್ದರೂ ನಾನಾಗಲಿ ಅಥವಾ ಪತಿಯಾಗಲಿ ಅವರೊಂದಿಗೆ ಮಾತನಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 