ಮಾದಕ ವಸ್ತು ಮಾರಾಟ ಮಾಡುತ್ತಿದ್ದವರ ಬಂಧನ: 23 ಲಕ್ಷ ರೂ ಮೌಲ್ಯದ ವಸ್ತುಗಳ ವಶ
ಬೆಂಗಳೂರು, ಮಾ.4 ,ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ಆರು ಜನರನ್ನು ಸಿಸಿಬಿ ಪೊಲೀಸರು ಬಂಧಿಸಿ, 23 ಲಕ್ಷ ರೂ ಮೌಲ್ಯದ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡಿದ್ದಾರೆ. ಇಂದಿರಾನಗರ ಹಾಗೂ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಕಡೆ ಸಿಸಿಬಿ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದಾರೆ.ಆಂಧ್ರಪ್ರದೇಶದ ಮೂಲದ ಸವರ ಕವಿತಾ (23), ಕಿಲ್ಲೊ ಧನುರ್ಜೈ (25), ಪಂಗಿ ಮಾತ್ಯರಾಜು (26), ಉಪ್ಪಲಪಟ್ಟಿ ಸುಬ್ಬಾರೆಡ್ಡಿ (42), ಗೌರವ್ (25), ಮಹ್ಮದ್ ಅಮ್ಮರ್ ಶಂಷಾದ್ (22) ಬಂಧಿತ ಆರೋಪಿಗಳು.ಬಂಧಿತರು ಆಂಧ್ರಪ್ರದೇಶದ ವೈಜಾಕ್ ನಿಂದ ಬಸ್ಸಿನಲ್ಲಿ ಮಾದಕ ವಸ್ತು ತಂದು ತಮ್ಮ ಪರಿಚಿತ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಬಂಧಿತರಿಂದ 43 ಕೆಜಿ ಗಾಂಜಾ, 6 ಮೊಬೈಲ್ ಫೋನ್, 20,000 ನಗದು, ಒಂದು ಬೈಕ್ ಸೇರಿ 23ಲಕ್ಷ ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಗಳ ವಿರುದ್ಧ ಇಂದಿರಾ ನಗರ, ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 