ಮಳೆ , ಪ್ರವಾಹದಿಂದ ಆಹಾರ ಉತ್ಪಾದನೆಯಲ್ಲಿ ಶೇಕಡ 25-30 ರಷ್ಟು ಕುಸಿತ
ಬೆಂಗಳೂರು ನ, 12 : ಕಳೆದ ವರ್ಷದ ಬರಗಾಲ ರಾಜ್ಯದ ರೈತರಿಗೆ ಸಾಕಷ್ಟು ನಷ್ಟ ಉಂಟು ಮಾಡಿದ್ದರೆ ಈ ವರ್ಷ , ಭಾರಿ ಮಳೆ , ಪ್ರವಾಹದಿಂದ ಆಹಾರ ಉತ್ಪಾದನೆಯಲ್ಲಿ ಶೇಕಡಾ 25-30ರಷ್ಟು ಕುಸಿತ ಉಂಟಾಗಲಿದೆ. ರಾಜ್ಯದ ಅನೇಕ ಭಾಗಗಳಲ್ಲಿ ವ್ಯಾಪಕ ಪ್ರವಾಹದಿಂದಾಗಿ ಹಿಂಗಾರು ಹಂಗಾಮಿನಲ್ಲಿ ಭಾರಿ ನಷ್ಟವಾಗಿರುವುದರಿಂದ ಆಹಾರ ಉತ್ಪಾದನೆಯಲ್ಲಿ ಕುಸಿತ ವಾಗಲಿದೆ ಎಂದು ಕೃಷಿ ಅಧಿಕಾರಿಗಳು ಆತಂಕ ತೋಡಿಕೊಂಡಿದ್ದಾರೆ. ಆಹಾರ ಧಾನ್ಯಗಳ ಜೊತೆಗೆ ಬೇಳೆಕಾಳುಗಳ ಉತ್ಪಾದನೆಯಲ್ಲೂ ಶೇಕಡಾ 25-30ರಷ್ಟು ಕುಸಿತ ಕಾಣಲಿದೆ. ಕೃಷಿ ಇಲಾಖೆ ಮೂಲಗಳ ಪ್ರಕಾರ, ರಾಜ್ಯವು 2019 ಕ್ಕೆ 110 ಲಕ್ಷ ಟನ್ ಆಹಾರ ಉತ್ಪಾದನೆ ಗುರಿ ನಿಗದಿಪಡಿಸಿದ್ದರೂ , ಪ್ರತಿಕೂಲ ಪರಿಸ್ಥಿತಿಯ ಕಾರಣ ಈಗ ಕೇವಲ 80-85 ಲಕ್ಷ ಟನ್ ಮಾತ್ರ ಉತ್ಪಾದನೆ ಆಗಬಹುದು ಎಂದೂ ಹೇಳಲಾಗಿದೆ. ಇದರ ಜೊತೆಗೆ 75 ಲಕ್ಷ ಹೆಕ್ಟೇರ್ ತೋಟದ ಬೆಳೆಯ ಪೈಕಿ ಮಳೆಯ ಕಾರಣ 7.5 ಲಕ್ಷ ಹೆಕ್ಟೇರ್ ಬೆಳೆ ಮಳೆ, ಪ್ರವಾಹದಿಂದ ಹಾಳಾಗಿದೆ. ಕೃಷಿ ಇಲಾಖೆಯ ವರದಿಗಳ ಪ್ರಕಾರ,ಇಲ್ಲಿಯವರೆಗೆ 33 ಲಕ್ಷ ಹೆಕ್ಟೇರ್ ಹಿಂಗಾರು ಬೆಳೆ ಬಿತ್ತನೆಯಾಗಬೇಕಿತ್ತು ತು ಆದರೆ ಈಗ ಕೇವಲ 12 ಲಕ್ಷ ಹೆಕ್ಟೇರ್ ಮಾತ್ರ ಬಿತ್ತನೆಯಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 